AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕಿಯಿಂದ ಹಿಂದೂ ಧರ್ಮ ಅವಹೇಳನ ಪ್ರಕರಣ; ತಮ್ಮ ವಿರುದ್ಧ ಯಾಕೆ ಎಫ್ಐಆರ್ ಎಂದ ಬಿಜೆಪಿ ಶಾಸಕರು

ಮಂಗಳೂರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ಶಾಲೆಯ ಬಳಿ ಮಕ್ಕಳ ಮನಸ್ಸಿನಲ್ಲಿ ಕೋಮು ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದಾಗ ಅರವಿಂದ ಬೆಲ್ಲದ್, ಬಿಜೆಪಿ ಶಾಸಕರು ಅಲ್ಲಿಗೆ ಹೊಗೇ ಇಲ್ಲ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದರು. ಗುಂಡೂರಾವ್ ಜೊತೆ ಸಚಿವ ಕೃಷ್ಣ ಭೈರೇಗೌಡ ಎದ್ದು ನಿಂತು ಮಾತಾಡತೊಡಗಿದಾಗ ಬಿಜೆಪಿ ಪರ ವಿಜಯೇಂದ್ರ ಮತ್ತು ಬೇರೆ ಶಾಸಕಕರು ಧ್ವನಿಗೂಡಿಸುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 15, 2024 | 2:06 PM

Share

ಬೆಂಗಳೂರು: ಮಂಗಳೂರಿನ ಸಂತ ಜೆರೂಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ (teacher Prabha sister) ಎನ್ನುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಪ್ರಕರಣ ಇಂದು ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಬಂದು ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಟೀಚರ್ ವಿರುದ್ಧ ಎಫ್ ಐ ಆರ್ ದಾಖಲಾಗಿಲ್ಲ ಆದರೆ, ಸ್ಥಳದಲ್ಲೇ ಇರದ ತನ್ನ ಮತ್ತು ಮತ್ತೊಬ್ಬ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Veda Vyas Kamath) ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ (Bharat Shetty) ಕೋಪದಲ್ಲಿ ಹೇಳಿದರು. ಶಾಲಾ ವ್ಯವಸ್ಥಾಪಕ ಮಂಡಳಿ ಶಿಕ್ಷಕಿಯನ್ನು ಈಗಾಗಲೇ ಸಸ್ಪೆಂಡ್ ಮಾಡಿದೆ ಅನ್ನೋದು ಬೇರೆ ವಿಚಾರ. ಸರ್ಕಾರದ ಪರ ಉತ್ತರ ನೀಡಲು ಎದ್ದು ನಿಂತ ಮಂಗಳೂರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ಶಾಲೆಯ ಬಳಿ ಮಕ್ಕಳ ಮನಸ್ಸಿನಲ್ಲಿ ಕೋಮು ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದಾಗ ಅರವಿಂದ ಬೆಲ್ಲದ್, ಬಿಜೆಪಿ ಶಾಸಕರು ಅಲ್ಲಿಗೆ ಹೊಗೇ ಇಲ್ಲ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದರು. ಗುಂಡೂರಾವ್ ಜೊತೆ ಸಚಿವ ಕೃಷ್ಣ ಭೈರೇಗೌಡ ಎದ್ದು ನಿಂತು ಮಾತಾಡತೊಡಗಿದಾಗ ಬಿಜೆಪಿ ಪರ ವಿಜಯೇಂದ್ರ ಮತ್ತು ಬೇರೆ ಶಾಸಕಕರು ಧ್ವನಿಗೂಡಿಸುತ್ತಾರೆ. ಅಗಲೇ ಸದನ ರಣಾಂಗಣವಾಗಿ ಬದಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ