Video: ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ

Updated on: Dec 19, 2024 | 11:24 AM

ಸಂಸತ್ತಿನ ಹೊರಗೆ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದಿದ್ದಾರೆ. ಪ್ರತಿಭಟನೆಯ ವೇಳೆ ತಳ್ಳಲ್ಪಟ್ಟು ನಂತರ ಗಾಯಗೊಂಡರು. ತಳ್ಳಿದ ರಭಸಕ್ಕೆ ಸಾರಂಗಿ ಕಣ್ಣಿಗೆ ಪೆಟ್ಟು ಬಿದ್ದು ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಸಾರಂಗಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತನನ್ನು ಸಾಗಿಸಲು ಆಂಬುಲೆನ್ಸ್ ಸ್ಥಳಕ್ಕೆ ಬಂದಿತು. ಅವರಿಗಾಗಿರುವ ಗಾಯದ ಬಗ್ಗೆ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ.

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ.
ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದರು ಎಂದು ಸಾರಂಗಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಬಿಜೆಪಿ ಸಂಸದರು ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಂಸತ್ತಿನ ಮಕರ ದ್ವಾರದಲ್ಲಿ ತಳ್ಳಿದರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನು ನಿಂತಿದ್ದೆ ರಾಹುಲ್ ಗಾಂಧಿ ಬೇರೊಬ್ಬ ಸಂಸದರನ್ನು ತಳ್ಳಿದ್ದರು, ಆ ಸಂಸದ ನನ್ನ ಮೇಲೆ ಬಿದ್ದು ನಾನು ಕೆಳಗೆ ಬಿದ್ದೆ ಎಂದು ಪ್ರತಾಪ್ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us