Chamarajanagara: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಅರುಣ್​ ಕುಮಾರ್​ ಬೆಳ್ಳಿ

Updated on: Mar 01, 2023 | 5:09 PM

ಅದಕ್ಕೂ ಮೊದಲು ನಡ್ಡಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಮಲೆಮಹದೇಶ್ವರಿಗೆ ಪೂಜೆ ಸಲ್ಲಿಸಿದರು.

ಚಾಮರಾಜನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಚಾಮರಾಜನಗರದಲ್ಲಿಂದು ಪಕ್ಷದ ವಿಜಯ ಸಂಕಲ್ಪ ಯಾತ್ರೆಗೆ (Vijay Sankalp Yatre) ಡ್ರಮ್ ಬಾರಿಸಿ, ಬಿಜೆಪಿ ಧ್ವಜ ಬೀಸುವ ಮೂಲಕ ಚಾಲನೆ ನೀಡಿದರು. ಅದಕ್ಕೂ ಮೊದಲು ನಡ್ಡಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಮಲೆಮಹದೇಶ್ವನಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನ ಮುಂದಿನಿಂದ ಬಸ್ ಚಲಿಸಿದಾಗ ಅದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದೆ ಶೋಭಾ ಕರಂದ್ಲಾಜೆ, ಕೆಎಸ್ ಈಶ್ವರಪ್ಪ, ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಮೊದಲಾದವರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.