JP Nadda in Karnataka: ಚಿಕ್ಕಮಗಳೂರಿನ ಸಿಟಿ ರವಿ ಮನೆಯಲ್ಲಿ ಗಣ್ಯರಿಗೆ ಭವ್ಯ ಸಾಂಪ್ರದಾಯಿಕ ಸ್ವಾಗತ

ಅರುಣ್​ ಕುಮಾರ್​ ಬೆಳ್ಳಿ

Updated on: Feb 21, 2023 | 11:12 AM

ಮನೆಯೊಳಗೆ ಕೂತಿದ್ದ ಕೆಲ ಮಠಾಧೀಶರ ಪಾದಗಳಿಗೆ ನಡ್ಡಾ ನಮಸ್ಕರಿದರು. ಅವರೊಂದಿಗೆ ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್, ಶೋಭಾ ಕರಂದ್ಲಾಜೆ ಮತ್ತು ಇತರ ನಾಯಕರಿದ್ದರು.

ಚಿಕ್ಕಮಗಳೂರು: ರಾಜ್ಯ ಪ್ರವಾಸದಲ್ಲಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರಿಗೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಸಿಟಿ ರವಿ (CT Ravi) ಮನೆಯಲ್ಲಿ ಭವ್ಯ ಸ್ವಾಗತ ಸಿಕ್ಕಿತು. ರವಿಯವರೇ ನಡ್ಡಾರನ್ನು ಹೂಮಾಲೆ ಹಾಕಿ ಬರಮಾಡಿಕೊಂಡರಲ್ಲದೆ ಅವರ ಪಾದ ಮುಟ್ಟಿ ನಮಸ್ಕರಿಸಿದರು. ರವಿ ಮನೆಯೊಳಗೆ ನಡ್ಡಾ ಬರುವಾಗ ಹಾದಿಯಲ್ಲಿ ಹೂಗಳನ್ನು ಎರಚಲಾಯಿತು ಮತ್ತು ಹೆಬ್ಬಾಗಿಲ ಬಳಿ ಮುತ್ತೈದೆಯರಿಂದ ಆರತಿ ಬೆಳಗಿಸಲಾಯಿತು. ಮನೆಯೊಳಗೆ ಕೂತಿದ್ದ ಕೆಲ ಮಠಾಧೀಶರ (pontiff) ಪಾದಗಳಿಗೆ ನಡ್ಡಾ ನಮಸ್ಕರಿದರು. ಅವರೊಂದಿಗೆ ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್, ಶೋಭಾ ಕರಂದ್ಲಾಜೆ ಮತ್ತು ಇತರ ನಾಯಕರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 21, 2023 11:08 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.