ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನ ನಿನ್ನೆ(ಮೇ 23) ಬೆಂಗಳೂರಿ ವಿಮಾನ ನಿಲ್ದಾಣ ಅದ್ಧೂರಿ ಸ್ವಾಗತಕೋರಲಾಗಿದ್ದು, ಇಂದು ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರಲು ಕೆಲ ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಇನ್ನು ಈ ಬಗ್ಗೆ ಅವರು ಮಾಧ್ಯಮಗಳ ಜೊತೆ ಖಡಕ್ ಆಗಿ ಮಾತನಾಡಿದ್ದಾರೆ.
ಬೆಂಗಳೂರು,ಮೇ 24): ಪಶ್ಚಿಮ ಬಂಗಾಳದಲ್ಲಿ (West Bengal) ಜಯಭೇರಿ ಬಾರಿಸಿದ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ (BJP) ಹೈಕಮಾಂಡ್ ಈಗ ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದತ್ತ ತನ್ನ ಸಂಪೂರ್ಣ ಚಿತ್ತ ನೆಟ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್(Nitin Nabin) ಅವರು ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನ ನಿನ್ನೆ(ಮೇ 23) ಬೆಂಗಳೂರಿ ವಿಮಾನ ನಿಲ್ದಾಣ ಅದ್ಧೂರಿ ಸ್ವಾಗತಕೋರಲಾಗಿದ್ದು, ಇಂದು ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರಲು ಕೆಲ ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಇನ್ನು ಈ ಬಗ್ಗೆ ಅವರು ಮಾಧ್ಯಮಗಳ ಜೊತೆ ಖಡಕ್ ಆಗಿ ಮಾತನಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
