ಬಿಜೆಪಿಯಿಂದ ಡಿಕೆ ಶಿವಕುಮಾರ್​ಗೆ ಡಿಸಿಎಂ ಆಫರ್: ಅಸಲಿ ಸತ್ಯ ಬಿಚ್ಚಿಟ್ಟ ಆರ್ ಅಶೋಕ್

Updated on: Oct 16, 2025 | 2:22 PM

ಬಿಜೆಪಿಯಿಂದ ಡಿಸಿಎಂ ಹುದ್ದೆ ಆಫರ್ ಬಂದಿತ್ತು ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಆಫರ್ ಕರೆ ಮಾಡಿದವರು ಯಾರು, ಯಾವಾಗ, ಯಾವ ನಂಬರ್‌ನಿಂದ ಕರೆ ಮಾಡಿದರು ಎಂಬುದನ್ನು ಡಿಕೆ ಶಿವಕುಮಾರ್ ಬಹಿರಂಗಪಡಿಸಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ. ಇದು ಕಾಂಗ್ರೆಸ್ ನಾಯಕತ್ವಕ್ಕೆ, ವಿಶೇಷವಾಗಿ ಸಿದ್ದರಾಮಯ್ಯನವರಿಗೆ ನೀಡಿದ ಬೆದರಿಕೆ ಸಂದೇಶ ಎಂದು ಆರ್.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 16: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿಯಿಂದ ಡಿಸಿಎಂ ಸ್ಥಾನದ ಆಫರ್ ಬಂದಿತ್ತು ಎಂಬ ಹೇಳಿಕೆಯ ಕುರಿತು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಹೇಳಿಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಸಿದ್ದರಾಮಯ್ಯನವರಿಗೆ ಡಿಕೆಶಿ ನೀಡಿದ ಬೆದರಿಕೆ ಸಂದೇಶ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ. ಯಾರು ಕರೆ ಮಾಡಿದ್ದರು, ಯಾವಾಗ ಕರೆ ಮಾಡಿದ್ದರು, ಯಾವ ನಂಬರ್‌ನಿಂದ ಕರೆ ಮಾಡಿದ್ದರು ಎಂಬುದನ್ನು ಡಿಕೆ ಶಿವಕುಮಾರ್ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ನಾಯಕತ್ವಕ್ಕೆ ಸವಾಲು ಹಾಕುವ ಉದ್ದೇಶದಿಂದ ನೀಡಲಾಗಿದೆ. ಒಂದು ವೇಳೆ ಅಧಿಕಾರ ಹಂಚಿಕೆ ಆಗದಿದ್ದರೆ, ಡಿಕೆ ಶಿವಕುಮಾರ್ ಬೇರೆ ದಾರಿ ಹಿಡಿಯಬಹುದು ಎಂಬ ಸಂದೇಶವನ್ನು ಈ ಹೇಳಿಕೆಯ ಮೂಲಕ ನೀಡಿದ್ದಾರೆ. ನವೆಂಬರ್ ತಿಂಗಳಲ್ಲಿ ಕ್ರಾಂತಿ ಆಗುವ ಮುನ್ಸೂಚನೆಗಳನ್ನು ಈ ಘಟನೆಗಳು ನೀಡುತ್ತಿವೆ ಎಂದೂ ಅಶೋಕ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More