JP Nadda in Karnataka: ಕಲಬುರಗಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪರೊಂದಿಗೆ ವಿಜಯಪುರಕ್ಕೆ ತೆರಳಿದರು
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಸ್ಥಳೀಯ ಮುಖಂಡರು ನಡ್ಡಾ ಅವರನ್ನು ಸ್ವಾಗತಿಸಿದರು
ಕಲಬುರಗಿ ಜಿಲ್ಲೆ ಮತ್ತು ನಗರದ ಬಿಜೆಪಿ ಕಾರ್ಯಕರ್ತರ ಸಂತೋಷ, ಸಡಗರಗಳಿಗೆ ಎಣೆಯಿದ್ದಂತಿಲ್ಲ ಮಾರಾಯ್ರೇ. ಕೇವಲ ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕಲಬುರಗಿಗೆ ಆಗಮಿಸಿ ಸೇಡಂ ತಾಲ್ಲೂಕಿನ ಮಳಖೇಡನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಇಂದು ಅಂದರೆ, ಶನಿವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಹೊತ್ತ ವಿಶೇಷ ವಿಮಾನವೊಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಮತ್ತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಸ್ಥಳೀಯ ಮುಖಂಡರು ನಡ್ಡಾ ಅವರನ್ನು ಸ್ವಾಗತಿಸಿದರು. ನಂತರ ನಡ್ಡಾ, ಬಿಎಸ್ ವೈ ಮತ್ತು ಅಶ್ವಥ್ ನಾರಾಯಣ ಜೊತೆ ಹೆಲಿಕಾಪ್ಟರೊಂದರಲ್ಲಿ ವಿಜಯಪುರಕ್ಕೆ ಹೊರಟರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

