ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು; ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಅಪ್ಪಿಕೊ ಚಳುವಳಿ

Edited By: ಆಯೇಷಾ ಬಾನು

Updated on: Sep 03, 2023 | 1:15 PM

Cauvery Water Dispute: ಕನ್ನಡಸೇನೆ ಕಾರ್ಯಕರ್ತರು ಇಂದು ಕೂಡ ಪ್ರತಿಭಟನೆ ನಡೆಸಿದ್ದು ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ತಲೆಯ ಮೇಲೆ ಚಪ್ಪಡಿ ಕಲ್ಲು ಇಟ್ಟುಕೊಂಡು ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯ, ಸೆ.03: ಮಂಡ್ಯದಲ್ಲಿ(Mandya) ಕಾವೇರಿ ಕಿಚ್ಚು ಮುಂದುವರೆದಿದೆ. ಕನ್ನಡಸೇನೆ ಕಾರ್ಯಕರ್ತರು ಇಂದು ಕೂಡ ಪ್ರತಿಭಟನೆ ನಡೆಸಿದ್ದು ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ(Protest). ತಲೆಯ ಮೇಲೆ ಚಪ್ಪಡಿ ಕಲ್ಲು ಇಟ್ಟುಕೊಂಡು ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ. ರೈತರ ತಲೆಯ ಮೇಲೆ ಚಪ್ಪಡಿ ಎಳೆದ ರಾಜ್ಯ ಸರ್ಕಾರ ಎಂದು ಬಾಯಿ ಬಡಿದುಕೊಂಡು ಜಿಲ್ಲಾ ಉಸ್ತುವಾರಿ ಸಚಿವ, ಸ್ಥಳೀಯ ಶಾಸಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಇನ್ನು ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಅಪ್ಪಿಕೊ ಚಳುವಳಿ ಮಾಡಿದ್ದಾರೆ. ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಇರುವ ಪ್ರತಿಮೆಯನ್ನು ಅಪ್ಪಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಕೆಆರ್​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಸಕ್ಕರಿನಗರಿ ಮಂಡ್ಯದಲ್ಲಿ ಅನ್ನದಾತರು ನಿನ್ನೆ ಆಕ್ರೋಶ ಹೊರ ಹಾಕಿದ್ದರು. ಕಳೆದ ಕೆಲ ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ನಿನ್ನೆ ಕೂಡ ರೈತರಿಗೆ ಬೆಂಬಲ ವ್ಯಕ್ತಪಡಿಸಿ ದಳಪತಿಗಳು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.

Published on: Sep 03, 2023 01:13 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More