ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ; ಅಶೋಕ ವಾದ್ಯ, ಸಿಟಿ ರವಿ ತಾಳಕ್ಕೆ ಹೆಜ್ಜೆ ಹಾಕಿದ ಶಾಸಕ ಪ್ರಭು ಚವ್ಹಾಣ್​

|

Updated on: Jul 24, 2024 | 10:46 PM

ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನಲೆ ವಿಧಾನಸಭೆ ಒಳಗಡೆಯೇ ಬಿಜೆಪಿ ಹಾಗೂ ಜೆಡಿಎಸ್​ ಅಹೋರಾತ್ರಿ ಧರಣಿ ನಡೆಸಿದೆ. ವಿಧಾನಸೌಧದ ಕಾರಿಡಾರ್​ಗಳಲ್ಲಿ ಕುಳಿತು ವಿಠ್ಠಲ ಭಜನೆ ಮಾಡಿದ್ದು, ಈ ವೇಳೆ ವಿಪಕ್ಷ ನಾಯಕ ಆರ್​ ಅಶೋಕ ವಾದ್ಯ ಮತ್ತು ಸಿಟಿ ರವಿ ತಾಳಕ್ಕೆ ಶಾಸಕ ಪ್ರಭು ಚವ್ಹಾಣ್​ ಹೆಜ್ಜೆ ಹಾಕಿದರು.

ಬೆಂಗಳೂರು, ಜು.24: ಮುಂಗಾರು ಅಧಿವೇಶನ ಶುರುವಾಗಿದೆ. ಅದರಂತೆ ಇಂದು(ಬುಧವಾರ) ಸದನದಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನಲೆ ವಿಧಾನಸಭೆ ಒಳಗಡೆಯೇ ಬಿಜೆಪಿ ಹಾಗೂ ಜೆಡಿಎಸ್​ ಅಹೋರಾತ್ರಿ ಧರಣಿ ನಡೆಸಿದೆ. ಇದರ ಜೊತೆಗೆ ವಿಧಾನಸಭೆಯಿಂದ ತಾಳ ಬಡಿಯುತ್ತಾ ಭಜನೆ ಮಾಡುತ್ತಲೇ ವಿಧಾನ ಪರಿಷತ್​ಗೆ ತೆರಳಿದ ಬಿಜೆಪಿ ವಿಧಾನ ಪರಿಷತ್ ಸದಸ್ಯರು, ವಿಧಾನಸೌಧದ ಕಾರಿಡಾರ್​ಗಳಲ್ಲೂ ವಿಠ್ಠಲ ಭಜನೆ ಮಾಡಿದರು. ವಿಪಕ್ಷ ನಾಯಕ ಆರ್​ ಅಶೋಕ ವಾದ್ಯ ಮತ್ತು ಸಿಟಿ ರವಿ ತಾಳಕ್ಕೆ ಶಾಸಕ ಪ್ರಭು ಚವ್ಹಾಣ್​ ಹೆಜ್ಜೆ ಹಾಕಿದರು. ಇನ್ನು ಭಜನೆ ಮೂಲಕವೇ ಕಾಂಗ್ರೆಸ್ ಸರ್ಕಾರಕ್ಕೆ ಲೆವಡಿ ಮಾಡಿದ ಬಿಜೆಪಿ, ‘ಸಮಾಜವಾದ ಅಂತಾರೆ ಮಜಾವನ್ನೇ ಮಾಡ್ತಾರೆ. ಸಮಾಜವಾದ ಅಂತಾರೆ ದಲಿತರ ಹಣವನ್ನು ನುಂಗ್ತಾರೆ ಎಂದು ಭಜನೆ ಮೂಲಕ ಕಾಂಗ್ರೆಸ್​ ಸರ್ಕಾರಕ್ಕೆ ಟಾಂಗ್​ ಕೊಟ್ಟರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on