ಭ್ರಷ್ಟಾಚಾರದ ವಿರುದ್ಧ ವಿಜಯ್ ಕರೆ ನೀಡಿದ ಬೆನ್ನಲ್ಲೇ ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ

Updated on: Jul 15, 2026 | 5:17 PM

ಜುಲೈ 10 ರಂದು ಕರೂರ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ವಿಜಯ್ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದರು. ತಮ್ಮ ಆಡಳಿತದಲ್ಲಿ ಲಂಚ ಪಡೆಯುವ ಅಥವಾ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಯಾವುದೇ ವ್ಯಕ್ತಿಗೆ ಅವಕಾಶ ನೀಡುವುದಿಲ್ಲ. ಅಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಅವರು ಭರವಸೆ ನೀಡಿದ್ದರು. ಹಾಗೇ, ಯಾರಾದರೂ ನಿಮ್ಮ ಬಳಿ ಲಂಚ ಕೇಳಿದರೆ ಕೊಡುವುದಿಲ್ಲ ಎಂದು ಹೇಳಿ ಎಂದಿದ್ದರು. ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ಬಿಡುಗಡೆ ಮಾಡಿದ್ದರು. ಅದರ ಬೆನ್ನಲ್ಲೇ ಈ ಲಂಚದ ವಿಡಿಯೋ ಬಹಿರಂಗವಾಗಿರುವುದು ವಿಜಯ್ ಅಭಿಮಾನಿಗಳಿಗೆ ಮತ್ತು ಪಕ್ಷಕ್ಕೆ ಮುಜುಗರ ತಂದಿಟ್ಟಿದೆ.

ಚೆನ್ನೈ, ಜುಲೈ 15: ಭ್ರಷ್ಟಾಚಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Joseph Vijay) ಕರೂರ್ ರ್‍ಯಾಲಿಯಲ್ಲಿ ನೀಡಿದ್ದ ಭಾಷಣದ ವಿಡಿಯೋ ಭಾರಿ ವೈರಲ್ ಆಗುತ್ತಿರುವ ಬೆನ್ನಲ್ಲೇ, ಅವರದ್ದೇ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜಿಲ್ಲಾ ಪದಾಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಆಪಾದಿತ ವಿಡಿಯೋವನ್ನು ಬಿಜೆಪಿ ಹಂಚಿಕೊಂಡಿದೆ. ತಮಿಳುನಾಡು ಬಿಜೆಪಿ ನಾಯಕ ವಿನೋಜ್ ಪಿ. ಸೆಲ್ವಂ ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಥವಚ್ಚಾ ಪೂರ್ವ ಜಿಲ್ಲೆಯ ಜಂಟಿ ಕಾರ್ಯದರ್ಶಿ ವೀರ ಎಂಬ ವ್ಯಕ್ತಿ ಸರ್ಕಾರಿ ಗುತ್ತಿಗೆದಾರರೊಬ್ಬರಿಂದ 1.30 ಲಕ್ಷ ರೂ. ಲಂಚ ಪಡೆಯುತ್ತಿರುವ ವಿಡಿಯೋ ಆ ಪಕ್ಷದ ನಿಜವಾದ ಮುಖವಾಡವನ್ನು ಬಯಲು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಜುಲೈ 10 ರಂದು ಕರೂರ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ವಿಜಯ್ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದರು. ತಮ್ಮ ಆಡಳಿತದಲ್ಲಿ ಲಂಚ ಪಡೆಯುವ ಅಥವಾ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಯಾವುದೇ ವ್ಯಕ್ತಿಗೆ ಅವಕಾಶ ನೀಡುವುದಿಲ್ಲ. ಅಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಅವರು ಭರವಸೆ ನೀಡಿದ್ದರು. ಹಾಗೇ, ಯಾರಾದರೂ ನಿಮ್ಮ ಬಳಿ ಲಂಚ ಕೇಳಿದರೆ ಕೊಡುವುದಿಲ್ಲ ಎಂದು ಹೇಳಿ ಎಂದಿದ್ದರು. ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ಬಿಡುಗಡೆ ಮಾಡಿದ್ದರು. ಅದರ ಬೆನ್ನಲ್ಲೇ ಈ ಲಂಚದ ವಿಡಿಯೋ ಬಹಿರಂಗವಾಗಿರುವುದು ವಿಜಯ್ ಅಭಿಮಾನಿಗಳಿಗೆ ಮತ್ತು ಪಕ್ಷಕ್ಕೆ ಮುಜುಗರ ತಂದಿಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us