AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಶೆ ಬದಿಗೊತ್ತಿರುವ ಸಿಟಿ ರವಿ ಮನೆಯಲ್ಲಿ ಮಧ್ಯಾಹ್ನದ ಭೋಜನ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 31, 2024 | 5:49 PM

Share

ಚಿಕ್ಕಮಗಳೂರು: ನಿಮಗೆ ನೆನಪಿರಬಹುದು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೈಕಮಾಂಡ್ ಬಿವೈ ವಿಜಯೇಂದ್ರರನ್ನು (BY Vijayendra) ನೇಮಕ ಮಾಡಿದಾಗ ರಾಜಕೀಯದಲ್ಲಿ ಅವರಿಗಿಂತ ಹಿರಿಯರಾಗಿರುವ ಮಾಜಿ ಶಾಸಕ ಸಿಟಿ ರವಿಗೆ (CT Ravi) ನಿರಾಶರಾಗಿದ್ದರು. ಅವರ ಮಾತಿನಲ್ಲಿ ಅಗ ಬೇಸರ ಸ್ಪಷ್ಟವಾಗಿ ಕಾಣುತಿತ್ತು ಮತ್ತು ಒಂದೆರಡು ಬಾರಿ ಅವರು ವೈರಾಗ್ಯದ ಮಾತುಗಳನ್ನೂ ಆಡಿದ್ದರು. ಅದರೆ, ಈಗ ಅದೆಲ್ಲ ಮಾಯವಾದಂತಿದೆ. ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ (Chikmagalur) ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು. ವಿಜೆಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ರವಿ ಮತ್ತು ಕೆಲ ಸ್ಥಳೀಯ ಬಿಜೆಪಿ ನಾಯಕರು ಒಟ್ಟಿಗೆ ಕೂತು ಊಟ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಮನೆಯ ಹೆಣ್ಣಮಕ್ಕಳು ಲವಲವಿಕೆಯಿಂದ ಓಡಾಡುತ್ತಾ ಅತಿಥಿಗಳಿಗೆ ಊಟ ಬಡಿಸುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ