ನಿರಾಶೆ ಬದಿಗೊತ್ತಿರುವ ಸಿಟಿ ರವಿ ಮನೆಯಲ್ಲಿ ಮಧ್ಯಾಹ್ನದ ಭೋಜನ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು.

ಚಿಕ್ಕಮಗಳೂರು: ನಿಮಗೆ ನೆನಪಿರಬಹುದು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೈಕಮಾಂಡ್ ಬಿವೈ ವಿಜಯೇಂದ್ರರನ್ನು (BY Vijayendra) ನೇಮಕ ಮಾಡಿದಾಗ ರಾಜಕೀಯದಲ್ಲಿ ಅವರಿಗಿಂತ ಹಿರಿಯರಾಗಿರುವ ಮಾಜಿ ಶಾಸಕ ಸಿಟಿ ರವಿಗೆ (CT Ravi) ನಿರಾಶರಾಗಿದ್ದರು. ಅವರ ಮಾತಿನಲ್ಲಿ ಅಗ ಬೇಸರ ಸ್ಪಷ್ಟವಾಗಿ ಕಾಣುತಿತ್ತು ಮತ್ತು ಒಂದೆರಡು ಬಾರಿ ಅವರು ವೈರಾಗ್ಯದ ಮಾತುಗಳನ್ನೂ ಆಡಿದ್ದರು. ಅದರೆ, ಈಗ ಅದೆಲ್ಲ ಮಾಯವಾದಂತಿದೆ. ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ (Chikmagalur) ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು. ವಿಜೆಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ರವಿ ಮತ್ತು ಕೆಲ ಸ್ಥಳೀಯ ಬಿಜೆಪಿ ನಾಯಕರು ಒಟ್ಟಿಗೆ ಕೂತು ಊಟ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಮನೆಯ ಹೆಣ್ಣಮಕ್ಕಳು ಲವಲವಿಕೆಯಿಂದ ಓಡಾಡುತ್ತಾ ಅತಿಥಿಗಳಿಗೆ ಊಟ ಬಡಿಸುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us