AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೇ ನಾವು ಬರ್ತೀವಿ, ನಾನೇ ಮುಖ್ಯಮಂತ್ರಿ ಆಗ್ತೀನಿ! ಬಸನಗೌಡ ಪಾಟೀಲ್ ಯತ್ನಾಳ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇದೇ ಯತ್ನಾಳ್ ಡಿಸೆಂಬರ್ ಒಳಗೆ ಸರ್ಕಾರ ಉರುಳಿ ಹೋಗುತ್ತದೆ ಅಂತ ಹೋದಲೆಲ್ಲೆಡೆ ಹೇಳುತ್ತಿದ್ದರು. ಡಿಸೆಂಬರ್ ಕಳೆಯಿತು, ಯತ್ನಾಳ್ ತಮ್ಮ ಹೇಳಿಕೆಯ ಅವಧಿಯನ್ನು ಲೋಕಸಭಾ ಚುನಾವಣೆಗೆ ವಿಸ್ತರಿಸಿದರು! ಈಗ ಸಿದ್ದರಾಮಯ್ಯ ಸರ್ಕಾರ ಉರುಳುವುದರ ಜೊತೆಗೆ ತಾನೇ ಮುಖ್ಯಮಂತ್ರಿ ಆಗುತ್ತೇನೆ ಅನ್ನುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 12, 2024 | 11:03 AM

Share

ಯಾದಗಿರಿ: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda patil Yatnal) ನಿನ್ನೆ ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತಾಡುವಾಗ ತಮ್ಮ ಎಂದಿನ ಮಾತಿನ ವರಸೆ ಮುದುವರಿಸಿದರು. ಜನರಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸುವುದು ಅವರಿಗೆ ಬಹಳ ಇಷ್ಟ. ಹಾಗಾಗೇ, ಭಾಷಣಗಳನ್ನು ಮಾಡುವಾಗ ಅತಿಶಯೋಕ್ತಿಗಳನ್ನು (hyperbole) ಬಳಸುತ್ತಾರೆ. ಇಲ್ಲಿ ಅವರು ಮಾತಾಡುವುದನ್ನು ಕೇಳಿ. ನರೇಂದ್ರ ಮೋದಿಯವರು (PM Narendra Modi) ಬರ್ತಾರಾ ಮತ್ತೇ ಪ್ರಧಾನಿ ಆಗ್ತಾರಾ ಅನ್ನುತ್ತಾರೆ. ಅವರು ಹಾಗೆ ಹೇಳುತ್ತಿದ್ದ ಹಾಗೆಯೇ ಜನ ಮೋದಿ ಮೋದಿ ಅಂತ ಒಕ್ಕೊರಲಿಂದ ಕೂಗುತ್ತಾರೆ. ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಆಗುತ್ತಾರೆ ಅಂತ ಹೇಳುತ್ತಿವೆ ಮತ್ತು ಅದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಯತ್ನಾಳ್ ಅಡುವ ಮುಂದಿನ ಮಾತು ಕೇಳಿ.ಕರ್ನಾಟದಲ್ಲಿ ನಾವು ಬರ್ತೀವಿ, ನಾನೇ ಮುಖ್ಯಮಂತ್ರಿ ಆಗ್ತೀನಿ, ಡಿಕೆ ಶಿವಕುಮಾರ್ ಗೆ ಏಯ್ ಹೋಗೋ ಅಂತೀನಿ ಅನ್ನುತ್ತಾರೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇದೇ ಯತ್ನಾಳ್ ಡಿಸೆಂಬರ್ ಒಳಗೆ ಸರ್ಕಾರ ಉರುಳಿ ಹೋಗುತ್ತದೆ ಅಂತ ಹೋದಲೆಲ್ಲೆಡೆ ಹೇಳುತ್ತಿದ್ದರು. ಡಿಸೆಂಬರ್ ಕಳೆಯಿತು, ಯತ್ನಾಳ್ ತಮ್ಮ ಹೇಳಿಕೆಯ ಅವಧಿಯನ್ನು ಲೋಕಸಭಾ ಚುನಾವಣೆಗೆ ವಿಸ್ತರಿಸಿದರು! ಈಗ ಸಿದ್ದರಾಮಯ್ಯ ಸರ್ಕಾರ ಉರುಳುವುದರ ಜೊತೆಗೆ ತಾನೇ ಮುಖ್ಯಮಂತ್ರಿ ಆಗುತ್ತೇನೆ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಾಸೀರ್ ಹುಸ್ಸೇನ್​ನಂಥ ದೇಶದ್ರೋಹಿಗಳನ್ನೇ ಕಾಂಗ್ರೆಸ್ ಪರಿಷತ್ ಮತ್ತು ರಾಜ್ಯಸಭೆಗೆ ಆಯ್ಕೆ ಮಾಡುತ್ತದೆ: ಬಸನಗೌಡ ಪಾಟೀಲ್ ಯತ್ನಾಳ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ