Karnataka Assembly Polls; ಬಿಜೆಪಿ ಮ್ಯಾಜಿಕ್ ನಂಬರ್ ದಾಟುತ್ತದೆ, ಜೆಡಿಎಸ್ ಜೊತೆ ಮೈತ್ರಿಯ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಬಸವರಾಜ ಬೊಮ್ಮಾಯಿ, ಸಿಎಮ್

ಅರುಣ್​ ಕುಮಾರ್​ ಬೆಳ್ಳಿ

Updated on: May 12, 2023 | 1:35 PM

ಕಾಂಗ್ರೆಸ್ ಪಕ್ಷದ ನಾಯಕರು ಜೆಡಿಎಸ್ ಧುರೀಣರೊಂದಿಗೆ ಮಾತುಕತೆಯಲ್ಲಿ ನಿರತರಾಗಿರುವುದು ತಮಗೆ ಸಂಬಂಧಿಸದ ವಿಷಯ ಎಂದು ಬೊಮ್ಮಾಯಿ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸವಿದೆ. ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಅತಂತ್ರ ವಿಧಾನ ಸಭೆಯಂಥ ಸನ್ನಿವೇಶವೇ ಸೃಷ್ಟಿಯಾಗುವುದಿಲ್ಲ, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುತ್ತದೆ, ಇದು ರಾಜ್ಯದ ನಾಯಕರಿಗೆ ಗೊತ್ತಿರುವಂತೆ ಕೇಂದ್ರದ ನಾಯಕರಿಗೂ ಗೊತ್ತಿದೆ ಎಂದು ಹೇಳಿದರು. ತಮ್ಮ ಪಕ್ಷ ಮ್ಯಾಜಿಕ್ ನಂಬರ್ (magic number) ದಾಟುವುದರಿಂದ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಮಾಡಿಕೊಳ್ಳುವ (alliance) ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು ಜೆಡಿಎಸ್ ಧುರೀಣರೊಂದಿಗೆ ಮಾತುಕತೆಯಲ್ಲಿ ನಿರತರಾಗಿರುವುದು ತಮಗೆ ಸಂಬಂಧಿಸದ ವಿಷಯ ಎಂದು ಬೊಮ್ಮಾಯಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.