ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಯೋಗೇಶ್ವರ್​ಗೆ ನೀಡುವಂತೆ ವರಿಷ್ಠರಿಗೆ ಬಿಜೆಪಿ ಕಾರ್ಯಕರ್ತರ ಆಗ್ರಹ

|

Updated on: Oct 10, 2024 | 2:54 PM

ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯ ಕ್ಷೇತ್ರದಲ್ಲಿ ಲಾಂಚ್ ಮಾಡಲು ಪ್ರಯತ್ನಿಸಿ ಪ್ರತಿಬಾರಿ ಕೈಸುಟ್ಟುಕೊಳ್ಳುತ್ತಿರುವ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ತಯಾರಿಲ್ಲ. ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋ ಅಂಶ ಕನ್ನಡಿಗರನ್ನು ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.

ರಾಮನಗರ: ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ರಂಗೇರುತ್ತಿದೆ. ಇವತ್ತು ರಾಮನಗರ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿ ಮತ್ತು ಸದಸ್ಯರು ಒಂದು ಪತ್ರಿಕಾ ಗೋಷ್ಠಿ ನಡೆಸಿ ಈ ಭಾಗದ ಹಿರಿಯ ಮತ್ತು ಜನಪ್ರಿಯ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರನ್ನು ಎನ್​ಡಿಎ ಅಭ್ಯರ್ಥಿಯಾಗಿ ಘೋಷಿಸಿ ಅವರ ಗೆಲುವಿಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕೈಜೋಡಿಸಲು ನೆರವಾಗಬೇಕೆಂದು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರ ನಾಯಕರನ್ನು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ

Follow us on