ಮಂಡ್ಯ: ತಮಿಳುನಾಡುಗೆ ಕಾವೇರಿ ನೀರು, ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದ ರೈತರಿಗೆ ಬಿಜೆಪಿ ಕಾರ್ಯಕರ್ತರ ಬೆಂಬಲ

ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಪಕ್ಕದ ರಾಜ್ಯಕ್ಕೆ ನೀರು ಹರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ರಾಜ್ಯದ ರೈತರನ್ನು ಬಲಿಪಶು ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಧಿಕ್ಕಾರ ಅಂತ ಬಿಜೆಪಿ ನಾಯಕರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಮಂಡ್ಯ: ತಮಿಳುನಾಡುಗೆ ಕಾವೇರಿ ನೀರು, ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದ ರೈತರಿಗೆ ಬಿಜೆಪಿ ಕಾರ್ಯಕರ್ತರ ಬೆಂಬಲ
|

Updated on: Aug 21, 2023 | 1:50 PM

ಮಂಡ್ಯ: ನೆರರಾಜ್ಯ ತಮಿಳುನಾಡಿಗೆ ಕಾವೇರಿ ನದಿ ನೀರು (Cauvery River water) ಹರಿಬಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದಿದ್ದಾರೆ. ಮಂಡ್ಯದಲ್ಲಿಂದು ರೈತರೊಂದಿಗೆ ಸೇರಿ ಬಿಜೆಪಿ ಕಾರ್ಯಕರ್ತರು (BJP workers) ಸಹ ಪ್ರತಿಭಟನೆ ನಡೆಸಿದರು. ಈ ವಿಡಿಯೋದಲ್ಲಿ ರೈತರಿಗಿಂತ ಬಿಜೆಪಿ ನಾಯಕರ ಸಂಖ್ಯೆ ಹೆಚ್ಚಾಗಿದೆ. ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ತಮಿಳುನಾಡುಗೆ ನೀರು ಬಿಡುತ್ತಿರುವ ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಪಕ್ಕದ ರಾಜ್ಯಕ್ಕೆ ನೀರು ಹರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ಧಿಕ್ಕಾರ, ರಾಜ್ಯದ ರೈತರನ್ನು ಬಲಿಪಶು ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (DK Shivakumar) ಧಿಕ್ಕಾರ ಅಂತ ಬಿಜೆಪಿ ನಾಯಕರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಜಿಲ್ಲೆಯ ಬೇರೆ ಭಾಗಗಳಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us