ಮಮತಾ ಬ್ಯಾನರ್ಜಿ ನಿವಾಸದ ಹೊರಗೆ ಬಿಜೆಪಿ ಬೆಂಬಲಿಗರಿಂದ ಜೈ ಶ್ರೀ ರಾಮ್ ಘೋಷಣೆ

Updated on: May 04, 2026 | 7:15 PM

ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. 15 ವರ್ಷಗಳ ಕಾಲ ಬಂಗಾಳದ ಮುಖ್ಯಮಂತ್ರಿಯಾಗಿ ಮೆರೆದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈ ಬಾರಿಯ ಚುನಾವಣೆಯಲ್ಲಿ ನೆಲ ಕಚ್ಚಿದೆ. ಈ ನಡುವೆ ಬಿಜೆಪಿಯ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯ ಹೊರಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸುತ್ತಿರುವುದರಿಂದ ಕಾರ್ಯಕರ್ತರು ಕೊಲ್ಕತ್ತಾದಾದ್ಯಂತ ವಿಜಯೋತ್ಸವ ಆಚರಿಸುತ್ತಿದ್ದಾರೆ.

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. 15 ವರ್ಷಗಳ ಕಾಲ ಬಂಗಾಳದ ಮುಖ್ಯಮಂತ್ರಿಯಾಗಿ ಮೆರೆದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈ ಬಾರಿಯ ಚುನಾವಣೆಯಲ್ಲಿ ನೆಲ ಕಚ್ಚಿದೆ. ಈ ನಡುವೆ ಬಿಜೆಪಿಯ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯ ಹೊರಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸುತ್ತಿರುವುದರಿಂದ ಕಾರ್ಯಕರ್ತರು ಕೊಲ್ಕತ್ತಾದಾದ್ಯಂತ ವಿಜಯೋತ್ಸವ ಆಚರಿಸುತ್ತಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ ಕಾರ್ಯಕರ್ತರನ್ನು ಪೊಲೀಸರು ಮಮತಾ ಬ್ಯಾನರ್ಜಿ ಮನೆಯ ಎದುರಿನಿಂದ ಹೊರಹೋಗುವಂತೆ ಸೂಚಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us