ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಜೊತೆ ಮಾಡಿಕೊಂಡಿರುವ ಮೈತ್ರಿ ಬ್ಯಾಕ್​ಫೈರ್ ಆಗಬಹುದು: ಸುಮಲತಾ ಅಂಬರೀಶ್

Updated on: Oct 11, 2023 | 7:51 PM

ಮೈತ್ರಿಯ ಮಾತುಕತೆ ನಡೆಸುವ ಮೊದಲಾಗಲೀ ಅಥವಾ ನಂತರವಾಗಲೀ ತನ್ನನ್ನು ಯಾರೂ ಸಂಪರ್ಕಿಸಿಲ್ಲ ಎಂದು ಹೇಳಿದ ಸುಮಲತಾ, ಬಿಜೆಪಿಗೆ ತಮ್ಮ ಬೆಂಬಲ ಈಗ ಇದೆ ಮುಂದೆಯೂ ಇರಬಹುದು; ಆದರೆ, ಪಕ್ಷಕ್ಕಾಗಿ ಮೊದಲಿನಿಂದಲೂ ದುಡಿಯುತ್ತಾ ಬಂದಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅವರೊಂದಿಗೆ ವಿಚಾರ ವಿನಿಮಯ ನಡೆಸದೆ ದೋಸ್ತಿ ಬೆಳೆಸಿದ್ದು ಸೂಕ್ತವೆನಿಸುತ್ತಿಲ್ಲ ಎಂದು ಸುಮಲತಾ ಹೇಳಿದರು

ಮಂಡ್ಯ: ಬಿಜೆಪಿ-ಜೆಡಿಎಸ್ ಮೈತ್ರಿಯ (JDS-BLP alliance) ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರ ಅಭಿಪ್ರಾಯ ಬಿಜೆಪಿ ನಾಯಕರಿಗೆ ಇಷ್ಟವಾಗದಿರಬಹುದು ಅದರೆ ಅವರು ವಾಸ್ತವಾಂಶವನ್ನು ಬಿಚ್ಟಿಟ್ಟಿದ್ದಾರೆ. ಮೈತ್ರಿಯ ಮಾತುಕತೆ ನಡೆಸುವ ಮೊದಲಾಗಲೀ ಅಥವಾ ನಂತರವಾಗಲೀ ತನ್ನನ್ನು ಯಾರೂ ಸಂಪರ್ಕಿಸಿಲ್ಲ ಎಂದು ಹೇಳಿದ ಸುಮಲತಾ, ಬಿಜೆಪಿಗೆ ತಮ್ಮ ಬೆಂಬಲ ಈಗ ಇದೆ ಮುಂದೆಯೂ ಇರಬಹುದು; ಆದರೆ, ಪಕ್ಷಕ್ಕಾಗಿ ಮೊದಲಿನಿಂದಲೂ ದುಡಿಯುತ್ತಾ ಬಂದಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅವರೊಂದಿಗೆ ವಿಚಾರ ವಿನಿಮಯ ನಡೆಸದೆ ದೋಸ್ತಿ ಬೆಳೆಸಿದ್ದು ಸೂಕ್ತವೆನಿಸುತ್ತಿಲ್ಲ ಎಂದು ಸುಮಲತಾ ಹೇಳಿದರು. ತಮಗಿಂತ ಮೊದಲು ಬಿಜೆಪಿಗಾಗಿ ಕೆಲಸ ಮಾಡುತ್ತಾ ಶಾಸಕರಾಗಿದ್ದ ಕೆಸಿ ನಾರಾಯಣಗೌಡರಿಗೆ (KC Narayana Gowda) ಕಾರ್ಯಕರ್ತರ ಮತ್ತು ಜನರ ಪಲ್ಸ್ ಚೆನ್ನಾಗಿ ಗೊತ್ತಿರುತ್ತದೆ. ಜನ ಏನು ಬಯಸುತ್ತಾರೆ ಅನ್ನೋದು ಅವರಿಗೆ ತಿಳಿದಿರುತ್ತದೆ. ಹಾಗಾಗಿ, ಅವರನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬಿಜೆಪಿ ಹಿರಿಯ ನಾಯಕರು ಮಾಡಿಕೊಂಡಿರುವ ಮೈತ್ರಿ ಬ್ಯಾಕ್ ಫೈರ್ ಆಗಬಹುದು ಎಂದು ಸುಮಲತಾ ಅಂಬರೀಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More