ಸಂವಿಧಾನದ ಮೂಲ ತತ್ವವನ್ನು ಬದಿಗಿಟ್ಟು ಬಿಜೆಪಿ ಭಾರತವನ್ನು ಹಿಂದೂರಾಷ್ಟ್ರ ಮಾಡಹೊರಟಿದೆ: ಯತೀಂದ್ರ ಸಿದ್ದರಾಮಯ್ಯ

Updated on: Jan 04, 2024 | 11:10 AM

ಧರ್ಮದ ಹೆಸರಲ್ಲಿ ದೇಶದಲ್ಲಿ ಆಡಳಿತ ನಡೆಸಿದರೆ ಸರ್ವಾಧಿಕಾರ ಧೋರಣೆ ತಲೆದೋರುತ್ತದೆ ಎಂದು ಹೇಳಿದ ಯತೀಂದ್ರ, ಭಾರತದ ನೆರೆರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಏನಾಗಿದೆ ಅನ್ನೋದು ವಿಶ್ವಕ್ಕೆ ಗೊತ್ತಿದೆ ಎಂದರು. ಜಾತ್ಯಾತೀತ ತತ್ವ ಬಿಟ್ಟು ಆಡಳಿತ ನಡೆಸಿದರೆ ದೇಶದ ಅಭಿವೃದ್ಧಿಯಾಗದು ಎಂದರು.

ದಾವಣಗೆರೆ: ಧರ್ಮದ ಹೆಸರಲ್ಲಿ ರಾಜಕಾರಣ ಮಾಡುವ ಬಿಜೆಪಿಯಂಥ ಪಕ್ಷಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಹೇಳಿದರು. ದಾವಣಗೆರೆ ತಾಲ್ಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಅವರು ಜಾತ್ಯಾತೀತತೆ (secularism) ಭಾರತ ಸಂವಿಧಾನದ ಮೂಲ ತತ್ವವಾಗಿದೆ, ಆದರೆ ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಹೊರಟಿರುವುದು ಅಪಾಯಕಾರಿ ಮತ್ತು ದೇಶದ ದುರಂತ ಎಂದು ಅವರು ಹೇಳಿದರು. ಧರ್ಮದ ಹೆಸರಲ್ಲಿ ದೇಶದಲ್ಲಿ ಆಡಳಿತ ನಡೆಸಿದರೆ ಸರ್ವಾಧಿಕಾರ ಧೋರಣೆ ತಲೆದೋರುತ್ತದೆ ಎಂದು ಹೇಳಿದ ಯತೀಂದ್ರ, ಭಾರತದ ನೆರೆರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಏನಾಗಿದೆ ಅನ್ನೋದು ವಿಶ್ವಕ್ಕೆ ಗೊತ್ತಿದೆ ಎಂದರು. ಜಾತ್ಯಾತೀತ ತತ್ವ ಬಿಟ್ಟು ಆಡಳಿತ ನಡೆಸಿದರೆ ದೇಶದ ಅಭಿವೃದ್ಧಿಯಾಗದು, ಇತಿಹಾಸದಿಂದ ನಾವು ಪಾಠ ಕಲಿಯಬೇಕಿದೆ ಎಂದ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More