ಬಿಕೆ ಹರಿಪ್ರಸಾದ್ ತಮ್ಮ ಸಮಾಜದ ಬಗ್ಗೆ ಮಾತಾಡೋದು ಪಕ್ಷ ವಿರೋಧಿ ಚಟುವಟಿಕೆ ಹೇಗಾಗುತ್ತದೆ? ಪ್ರಿಯಾಂಕ್ ಖರ್ಗೆ

ಹರಿಪ್ರಸಾದ್ ಅವರ ಮಾತುಗಳ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದಾಮಯ್ಯನವರೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇನ್ನು ತಾನು ಏನು ಹೇಳಲಾಗುತ್ತೆ ಎಂದು ಕೇಳಿದ ಅವರು, ಹರಿಪ್ರಸಾದ್ ತಮ್ಮ ಮಾತುಗಳಲ್ಲಿ ಎಲ್ಲೂ ಮುಖ್ಯಮಂತ್ರಿಯ ಹೆಸರನ್ನು ಪ್ರಸ್ತಾಪಿಸಿಲ್ಲ ಮತ್ತು ಸಿದ್ದರಾಮಯ್ಯ ಕೂಡ ಅದನ್ನೇ ಹೇಳಿದ್ದಾರೆ ಎಂದರು.

|

Updated on: Sep 11, 2023 | 4:23 PM

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪರೋಕ್ಷ ದಾಳಿ ನಡೆಸುತ್ತಿರುವ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಅವರ ವರಸೆಯನ್ನು ಖಂಡಿಸಲಿಲ್ಲ, ಸಮರ್ಥಿಸಿಕೊಳ್ಳಲೂ ಇಲ್ಲ. ಪ್ರಸಾದ್, ತಮ್ಮ ಸಮಾಜದ ಬಗ್ಗೆ ಮಾತಾಡಿದ್ದಾರೆ ಮತ್ತು ಅದರ ಸಂಘಟನೆಗಾಗಿ ಓಡಾಡುತ್ತಿದ್ದಾರೆ, ಅವರು ತಮ್ಮ ಸಮಾಜಕ್ಕಾಗಿ ಮಾಡುವ ಕೆಲಸವನ್ನು ಪಕ್ಷವಿರೋಧಿ ಚಟುವಟಿಕೆ ಅಂತ ಹೇಗೆ ಹೇಳಲಾಗುತ್ತೆ ಎಂದು ಪ್ರಿಯಾಂಕ್ ಹೇಳಿದರು. ಹರಿಪ್ರಸಾದ್ ಪಕ್ಷದ ಒಬ್ಬ ಹಿರಿಯ ಹಾಗೂ ಅನುಭವಿ ನಾಯಕ, ಅವರಿಗೆ ತಮ್ಮ ಜವಾಬ್ದಾರಿ ಗೊತ್ತಿದೆ, ರಾಜ್ಯಮಟ್ಟದಲ್ಲದೆ, ರಾಷ್ಟ್ರಮಟ್ಟದಲ್ಲೂ ಹಿರಿಯ ನಾಯಕರೆಲ್ಲ ಅವರಿಗೆ ಗೊತ್ತು ಎಂದು ಖರ್ಗೆ ಹೇಳಿದರು. ಅವರ ಮಾತುಗಳ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದಾಮಯ್ಯನವರೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇನ್ನು ತಾನು ಏನು ಹೇಳಲಾಗುತ್ತೆ ಎಂದು ಕೇಳಿದ ಅವರು, ಹರಿಪ್ರಸಾದ್ ತಮ್ಮ ಮಾತುಗಳಲ್ಲಿ ಎಲ್ಲೂ ಮುಖ್ಯಮಂತ್ರಿಯ ಹೆಸರನ್ನು ಪ್ರಸ್ತಾಪಿಸಿಲ್ಲ ಮತ್ತ್ತು ಸಿದ್ದರಾಮಯ್ಯ ಕೂಡ ಅದನ್ನೇ ಹೇಳಿದ್ದಾರೆ ಎಂದರು. ನಂಜೇಗೌಡರು, ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ಏನಂತ ದೂರು ನೀಡಿದ್ದಾರೆ ಅಂತ ತಮಗೆ ಗೊತ್ತಿಲ್ಲ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್