AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ

ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ

ಗಣಪತಿ ಶರ್ಮಾ
|

Updated on: Jun 10, 2026 | 11:58 AM

Share

ನೂತನ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬಿಕೆ ಹರಿಪ್ರಸಾದ್ ಇಂದು (ಜೂನ್ 10) ಮೊದಲ ಬಾರಿಗೆ ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಕಚೇರಿಯಲ್ಲಿ ಅದ್ದೂರಿ ಸ್ವಾಗತ ಪಡೆದ ಅವರು, ಬಳಿಕ ಜಮೀರ್ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಜಿಬಿಎ ಚುನಾವಣೆ ವೀಕ್ಷಕರೊಂದಿಗೆ ಮಹತ್ವದ ಮೊದಲ ಸಭೆ ನಡೆಸಿದರು.

ಬೆಂಗಳೂರು, ಜೂನ್ 10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಕೆ ಹರಿಪ್ರಸಾದ್ ಬುಧವಾರ ಮೊದಲ ಬಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ ಸಾರಥ್ಯ ವಹಿಸಿಕೊಂಡ ಬಳಿಕ ಮೊದಲ ಬಾರಿ ಕಚೇರಿಗೆ ಆಗಮಿಸಿದ ನೂತನ ಸಾರಥಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅತ್ಯಂತ ಅದ್ದೂರಿ ಮತ್ತು ಸಡಗರದ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಹಿರಿಯ ಎಂಎಲ್‌ಸಿಗಳು ಹೂಗುಚ್ಛ ನೀಡಿ ಹರಿಪ್ರಸಾದ್ ಅವರನ್ನು ಬರಮಾಡಿಕೊಂಡರು. ಇದೇ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್ ಕೂಡ ಕೆಪಿಸಿಸಿ ಕಚೇರಿಗೆ ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

ಕಚೇರಿಗೆ ಭೇಟಿ ನೀಡಿದ ಬೆನ್ನಲ್ಲೇ ಆಡಳಿತಾತ್ಮಕವಾಗಿ ಸಕ್ರಿಯರಾದ ಬಿಕೆ ಹರಿಪ್ರಸಾದ್, ಮೊದಲ ಅಧಿಕೃತ ಸಭೆ ನಡೆಸಿದರು. ಮುಂಬರುವ ಜಿಬಿಎ (GBA) ಚುನಾವಣೆಗಳ ಸಿದ್ಧತೆಗಾಗಿ ಪಕ್ಷದಿಂದ ನಿಯೋಜಿಸಲಾಗಿರುವ ವೀಕ್ಷಕರೊಂದಿಗೆ (Observers) ಅವರು ಸುದೀರ್ಘ ಸಮಾಲೋಚನೆ ನಡೆಸಿದರು. ಈ ಪ್ರಮುಖ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ಹಿರಿಯ ಮುಖಂಡರಾದ ನಸೀರ್ ಅಹಮದ್, ಸಲೀಂ ಅಹಮದ್, ಜಿ.ಸಿ. ಚಂದ್ರಶೇಖರ್, ಬೇಳೂರು ಗೋಪಾಲಕೃಷ್ಣ ಹಾಗೂ ಐವಾನ್ ಡಿಸೋಜ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More