ಸ್ಪಂದನ ಅಂತ್ಯಸಂಸ್ಕಾರ: ಪಾತಕಿಗಳನ್ನು ಥರಗುಟ್ಟುವಂತೆ ಮಾಡಿದ್ದ ಬಿಕೆ ಶಿವರಾಂ ಹರಿಶ್ಚಂದ್ರ ಘಾಟ್ ನಲ್ಲಿ ದೈನೇಸಿಯಾಗಿ ಕೂತಿದ್ದರು

Updated on: Aug 09, 2023 | 5:46 PM

ಅವರ ಕಿರಿಯ ಸಹೋದರ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಹೆಸರು. ಅದರೆ ರಾಜಕಾರಣ ನಿವೃತ್ತ ಖಡಕ್ ಪೊಲೀಸ್ ಅಧಿಕಾರಿಗೆ ಒಲಿಯಲಿಲ್ಲ. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಮ್ಮದಿಯಿಂದ ವಿಶ್ರಾಂತ ಬದುಕು ನಡೆಸುತ್ತಿದ್ದ ಶಿವರಾಂ ಇನ್ನು ಮೇಲೆ ಅಗಲಿದ ಮಗಳನ್ನು ನೆನೆಯುತ್ತಾ ಬದುಕು ಸವೆಸಬೇಕಿದೆ.

ಬೆಂಗಳೂರು: ಬಿಕೆ ಶಿವರಾಂ (BK Shivaram)-ಈ ಹೆಸರು ಕೇಳಿದರೆ ಪಾತಕ ಲೋಕ (crime world) ಥರಗುಟ್ಟುತ್ತಿತ್ತು, ಎಂಟೆದೆಯ ರೌಡಿ ಶೀಟರ್ ಕೂಡ ಬೆವರುತ್ತಿದ್ದ. ಅಂಥ ಗಂಡೆದೆಯ ದಕ್ಷ ಪೊಲೀಸ್ ಅಧಿಕಾರಿಗೆ (police officer) ಇವತ್ತು ಬಂದೊದಗಿರುವ ಸ್ಥಿತಿ ನೋಡಿ. ಕೇವಲ 41ರ ಪ್ರಾಯದ ಮಗಳು ಸ್ಪಂದನಾಳನ್ನು ಕಳೆದುಕೊಂಡು ಹರಿಶ್ಚಂದ್ರಘಾಟ್​ನಲ್ಲಿ ದೈನೇಸಿಯಾಗಿ ಕೂತಿದ್ದಾರೆ. ಯಾವುದೇ ತಂದೆತಾಯಿ ತಮಗಿಂತ ಮೊದಲು ಮಕ್ಕಳು ನಿಧನಾರಾಗುವ ಸ್ಥಿತಿಯನ್ನು ನೋಡಲಾರರು, ಅರಗಿಸಿಕೊಳ್ಳಲಾರರು. 71-ವರ್ಷ ವಯಸ್ಸಿನ ಶಿವರಾಂಗೆ ಇಳಿವಯಸ್ಸಿಲ್ಲಿ ಇಂಥ ಆಘಾತ ಎದುರಾಗಬಾರದಿತ್ತು. ಪೊಲೀಸ್ ಸೇವೆಯಿಂದ ನಿವೃತ್ತರಾದ ಬಳಿಕ ಅವರು ರಾಜಕಾರಣದಲ್ಲಿ ಹೆಸರು ಮಾಡುವ ವಿಫಲ ಯತ್ನ ಮಾಡಿದರು. ಅವರ ಕಿರಿಯ ಸಹೋದರ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಹೆಸರು. ಅದರೆ ರಾಜಕಾರಣ ನಿವೃತ್ತ ಖಡಕ್ ಪೊಲೀಸ್ ಅಧಿಕಾರಿಗೆ ಒಲಿಯಲಿಲ್ಲ. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಮ್ಮದಿಯಿಂದ ವಿಶ್ರಾಂತ ಬದುಕು ನಡೆಸುತ್ತಿದ್ದ ಶಿವರಾಂ ಇನ್ನು ಮೇಲೆ ಅಗಲಿದ ಮಗಳನ್ನು ನೆನೆಯುತ್ತಾ ಬದುಕು ಸವೆಸಬೇಕಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More