ಹುಲಿಗೆ ರಕ್ತದ ರುಚಿ ಸಿಕ್ಕಿದೆ, ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಷಡ್ಯಂತ್ರ : ಬಿ ಎಲ್ ಸಂತೋಷ್

Updated on: Oct 03, 2025 | 5:36 PM

ಬಿ ಎಲ್ ಸಂತೋಷ್ ಅವರು ಧರ್ಮಸ್ಥಳದ ಮೇಲೆ ನಡೆಯುತ್ತಿರುವ ವೈಚಾರಿಕ ಆಕ್ರಮಣ ಕುರಿತು ಮಾತನಾಡಿದ್ದಾರೆ. ಇದು ಕೇವಲ ಧರ್ಮಸ್ಥಳಕ್ಕೆ ಸೀಮಿತವಲ್ಲ, ಉಡುಪಿ, ಶಬರಿಮಲೆ ಸೇರಿದಂತೆ ಹಲವು ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ದಾಳಿ, ವಾಮಪಂಥೀಯ ಮತ್ತು ರಾಜಕೀಯ ಶಕ್ತಿಗಳು ನಂಬಿಕೆಗಳಿಗೆ ಸವಾಲು ಹಾಕುತ್ತಿವೆ, ಇದಕ್ಕೆ ತಕ್ಕ ಉತ್ತರ ನೀಡುವ ಕಾರ್ಯವಾಗಬೇಕಿದೆ ಎಂದು ಹೇಳಿದ್ದಾರೆ.

ಉಡುಪಿ, ಅ.3: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ( BL Santosh) ಅವರು ಇತ್ತೀಚೆಗೆ ಧರ್ಮಸ್ಥಳದ ಮೇಲೆ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದನ್ನು ವೈಚಾರಿಕ ಆಕ್ರಮಣ ಎಂದು ಹೇಳಿದ್ದಾರೆ. ಇಂತಹಅ ಅನೇಕ ದಾಳಿಗಳಾಗಿವೆ,ಅದರಲ್ಲಿ ಇದು ಒಂದು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಮಾತ್ರವಲ್ಲದೆ, ಕಳೆದ ಎರಡು-ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣಮಠದ ಮೇಲೂ ಇದೇ ರೀತಿ ನಡೆದಿತ್ತು. ಆದರೆ ಇಷ್ಟು ದೊಡ್ಡ ಪ್ರಮಾಣದ ನಡೆದಿರಲಿಲ್ಲ ಎಂದರು. ಮುಂದೆ ಮೂಡುಬಿದ್ರೆ ಮತ್ತು ಇತರ ದೇವಸ್ಥಾನಗಳ ಮೇಲೂ ಇದೇ ರೀತಿಯ ಆಕ್ರಮಣಗಳು ನಡೆಯುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.ಈ ವಿದ್ಯಮಾನಗಳು ಒಂದು ರೀತಿ ಹುಲಿಗೆ ರಕ್ತದ ರುಚಿ ಸಿಕ್ಕಿದೆ ಎಂಬದಂತಿದೆ. ಕೆಲವು ವೈಚಾರಿಕ ವಾಮಪಂಥೀಯ ಮತ್ತು ರಾಜಕೀಯ ಶಕ್ತಿಗಳು ಶಬರಿಮಲೆ, ಈಶ ಆಶ್ರಮ ಮತ್ತು ಶನಿ ಶಿಂಗ್ಣಾಪುರದಲ್ಲಿ ಇಂತಹ ಆರೋಪಗಳುನ್ನು ಮಾಡಿದೆ. ಉಡುಪಿಯಲ್ಲೂ ಇದೇ ರೀತಿಯ ಪ್ರಯತ್ನ ನಡೆದಿತ್ತು. ಇದೀಗ ಧರ್ಮಸ್ಥಳದಲ್ಲೂ ಅದೇ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕೃತ್ಯಗಳನ್ನು ಮಾಡುವವರಿಗೆ ಶಿಕ್ಷೆ ಆಗಬೇಕು, ಜೊತೆಗೆ ನಡೆಯುತ್ತಿರುವ ಅಪಪ್ರಚಾರಕ್ಕೂ ಸೂಕ್ತ ಶಿಕ್ಷೆಯಾಗಬೇಕು ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More