ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

Updated on: Aug 24, 2025 | 9:11 PM

ಬೆಂಗಳೂರಿನ ಹಲಸೂರು ಗೇಟ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಬರೀಶ್ ಎಂಬ ಬಾಲಕ ಕೆ.ಆರ್. ಮಾರ್ಕೆಟ್‌ಗೆ ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಬೈಕಿನಲ್ಲಿದ್ದಾಗ ಈ ಅಪಘಾತ ಸಂಭವಿಸಿದೆ. ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ರಸ್ತೆಗೆ ಬಿದ್ದಿದ್ದಾನೆ ಮತ್ತು ಬಸ್ ಅವನ ಮೇಲೆ ಹರಿದಿದೆ. ಈ ದುರಂತದಿಂದಾಗಿ ಬಾಲಕನ ಕುಟುಂಬ ಆಘಾತಕ್ಕೀಡಾಗಿದೆ.

ಬೆಂಗಳೂರು, ಆಗಸ್ಟ್​ 24: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಚಕ ದಿಲೀಪ್ ಕುಮಾರ್ ಅವರ ಅಣ್ಣನ ಮಗ ಶಬರೀಶ್ (10) ಮೃತದುರ್ದೈವಿ. ಅರ್ಚಕ ದಿಲೀಪ್ ಕುಮಾರ್ ಜಿ.ಎಂ.ಪಾಳ್ಯದ ನಿವಾಸಿಯಾಗಿದ್ದಾರೆ. ಶಬರೀಶ್​ ಚಿಕ್ಕಪ್ಪ, ಚಿಕ್ಕಮ್ಮನ ಜೊತೆ ಕೆ.ಆರ್​.ಮಾರ್ಕೆಟ್​ಗೆ ಬಂದಿದ್ದನು. ಈ ವೇಳೆ ಬೈಕ್​ಗೆ ಬಸ್ ಟಚ್ ಆಗಿದ್ದರಿಂದ ಶಬರೀಶ್ ಕೆಳಗೆಬಿದ್ದಿದ್ದಾನೆ. ಶಬರೀಶ್ ಮೇಲೆ ಬಿಎಂಟಿಸಿ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದಿಲೀಪ್ ಕುಮಾರ್ ದಂಪತಿ ಆಕ್ರಂದನ ಮುಗಿಲು ಮುಟ್ಟಿದೆ.

ವರದಿ: ವಿಕಾಸ್​ ಟಿವಿ9 ಬೆಂಗಳೂರು