ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

Updated on: Mar 18, 2025 | 10:00 PM

ಮಧ್ಯಪ್ರದೇಶದ ಶಿವಪುರಿಯ ಮಾತಟಿಲಾ ಅಣೆಕಟ್ಟಿನಲ್ಲಿ ದೋಣಿ ಮುಳುಗಿ ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 7 ಜನರು ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೂರು ಮಹಿಳೆಯರು ಸೇರಿದಂತೆ ಏಳು ಜನರು ಕಾಣೆಯಾಗಿದ್ದಾರೆ, ಎಂಟು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಶಿವಪುರಿ, (ಮಾರ್ಚ್ 18): ಮಧ್ಯಪ್ರದೇಶದ ಶಿವಪುರಿಯ ಮಾತಟಿಲಾ ಅಣೆಕಟ್ಟಿನ ಬಳಿ ಇಂದು ಸಂಜೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ಹಲವರು ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಖಾನಿಯಾಧಾನ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದ್ದು, ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 7 ಜನರು ನಾಪತ್ತೆಯಾಗಿದ್ದಾರೆ. ಅದೃಷ್ಟವಶಾತ್, ಸ್ಥಳೀಯರು 8 ಜನರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ದೋಣಿಯಲ್ಲಿ ರಾಜವನ್ ಗ್ರಾಮದ 15 ನಿವಾಸಿಗಳಿದ್ದರು, ಅವರು ಅಣೆಕಟ್ಟಿನ ಮಧ್ಯದಲ್ಲಿರುವ ದ್ವೀಪದಲ್ಲಿರುವ ಸಿದ್ಧ್ ಬಾಬಾ ದೇವಸ್ಥಾನಕ್ಕೆ ಭೇಟಿ ನೀಡಲು ತೆರಳುತ್ತಿದ್ದರು. ವರದಿಗಳ ಪ್ರಕಾರ, ಇಂದು ಸಂಜೆ ಸುಮಾರು 5 ಗಂಟೆಗೆ ಭಕ್ತರ ಗುಂಪು ಹೊರಟಿತು. ಪ್ರಯಾಣದ ಸಮಯದಲ್ಲಿ ದೋಣಿ ಸಮತೋಲನ ತಪ್ಪಿ ಮಗುಚಿ ಬಿದ್ದಿದ್ದು, ಅನೇಕ ಪ್ರಯಾಣಿಕರು ನೀರಿಗೆ ಬಿದ್ದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More