ಪ್ರವಾಹ ಸ್ಥಳಗಳ ಪರಿಶೀಲನೆಗೆ ತೆರಳಿದ್ದಾಗ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ

Updated on: Sep 19, 2024 | 9:14 AM

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆಂದು ತೆರಳಿದ್ದಾಗ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿರ್‌ಭೂಮ್ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುವ ವೇಳೆ ಈ ಅವಘಡ ಸಂಭವಿಸಿದೆ.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆಂದು ತೆರಳಿದ್ದಾಗ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿರ್‌ಭೂಮ್ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುವ ವೇಳೆ ಈ ಅವಘಡ ಸಂಭವಿಸಿದೆ.

ದೋಣಿಯಲ್ಲಿ ಸಂಸದರು, ಶಾಸಕರು, ಉನ್ನತ ಅಧಿಕಾರಿಗಳು ಸೇರಿ ಒಟ್ಟು 13 ಮಂದಿ ಇದ್ದರು. ಲಾಬ್‌ಪುರ್‌ನ ಟಿಎಂಸಿ ಶಾಸಕ ಅಭಿಜಿತ್ ಸಿಂಗ್, ಪಕ್ಷದ ಸಂಸದರು, ಅಸಿತ್ ಮಲ್ ಮತ್ತು ಶಮೀರುಲ್ ಇಸ್ಲಾಂ, ಬಿರ್‌ಭೂಮ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಧನ್ ರಾಯ್ ಮತ್ತು ಇತರ ಅಧಿಕಾರಿಗಳು ಬೋಟ್‌ನಲ್ಲಿ ಬೀರ್‌ಭಮ್‌ನ ಬಲರಾಮ್‌ಪುರ ಮತ್ತು ಲ್ಯಾಬ್‌ಪುರದ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನೆಯ ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಯಾವುದೇ ಸುರಕ್ಷತಾ ಜಾಕೆಟ್ ಧರಿಸದ ತೃಣಮೂಲ ಸಂಸದರು ಮತ್ತು ಸ್ಥಳೀಯ ಅಧಿಕಾರಿಗಳನ್ನು ರಕ್ಷಿಸಿದರು. ಭಾರೀ ಮಳೆಯ ನಂತರ ಪಶ್ಚಿಮ ಬಂಗಾಳದ ಹಲವಾರು ಜಿಲ್ಲೆಗಳು ಪ್ರವಾಹದಂತಹ ಪರಿಸ್ಥಿತಿಗೆ ಸಾಕ್ಷಿಯಾಗಿದೆ ಮತ್ತು ಇದರ ಪರಿಣಾಮವಾಗಿ ಅಲ್ಪಾವಧಿಯಲ್ಲಿಯೇ ಬ್ಯಾರೇಜ್‌ಗಳಿಂದ ನೀರು ಹೊರಸೂಸುವಿಕೆ ಹೆಚ್ಚಾಗಿದೆ.

ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ದುರ್ಗಾಪುರ ಬ್ಯಾರೇಜ್‌ನಿಂದ 1,33,750 ಕ್ಯೂಸೆಕ್, ಕಂಗಸಾಬತಿ ಅಣೆಕಟ್ಟಿನಿಂದ 40,000 ಕ್ಯೂಸೆಕ್, ಮೈಥಾನ್ ಅಣೆಕಟ್ಟಿನಿಂದ 2,00,000 ಕ್ಯೂಸೆಕ್ ಮತ್ತು ಪಂಚೇಟ್ ಅಣೆಕಟ್ಟಿನಿಂದ 50,000 ಕ್ಯೂಸೆಕ್ ನೀರನ್ನು ಬಿಡಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More