Gujarat Plane Crash: ದೇಹಗಳು ಸುಟ್ಟು ಕರಕಲಾಗಿರುವುದರಿಂದ ಗುರುತಿಸುವುದು ಸಂಬಂಧಿಕರಿಗೆ ಸಾಧ್ಯವಾಗುತ್ತಿಲ್ಲ
ಸತ್ತವರಲ್ಲಿ 59ಜನ ವಿದೇಶಿಯರಿರುವ ಕಾರಣ ಅವರ ಕುಟುಂಬಸ್ಥರು ಅಹಮದಾಬಾದ್ ಬರುವುದು ತಡವಾಗುತ್ತಿದೆ. ಏತನ್ಮಧ್ಯೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ದುರಂತ ನಡೆದ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳೊಂದಿಗೆ ಮತ್ತು ಮೃತರ ಸಂಬಂಧಿಕರೊಂದಿಗೆ ಮಾತಾಡಿ ಸಾಂತ್ವನ ಹೇಳಿದ್ದಾರೆ ಮತ್ತು ವಿಮಾನ ಪತನಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರೊಂದಿಗೆ ಸಭೆಯನ್ನು ಸಹ ನಡೆಸಿದ್ದಾರೆ.
ಅಹ್ಮದಾಬಾದ್, ಜೂನ್ 13: ನಿನ್ನೆ ನಡೆದ ವಿಮಾನ ದುರಂತದಲ್ಲಿ ಬಲಿಯಾದವರ ದೇಹಗಳು ಯಾವಮಟ್ಟಿಗೆ ಸುಟ್ಟುಕರಕಲಾಗಿವೆ ಎಂದರೆ ಅವುಗಳನ್ನು ಗುರುತಿಸುವುದು ಅಹಮದಾಬಾದ್ ಸಿವಿಲ್ ಆಸ್ಪತ್ರೆ ಸಿಬ್ಬಂದಿಗೆ ದುಸ್ಸಾಧ್ಯವಾಗಿದೆ. ಗಾಯಾಳುಗಳನ್ನು ಇಲ್ಲಿ ದಾಖಲಿಸಲಾಗಿದೆ ಮತ್ತು ಮೃತದೇಹಗಳನ್ನು ಸಹ ಇಲ್ಲೇ ಇಡಲಾಗಿದೆ. 241 ದೇಹಗಳ ಪೈಕಿ ಕಡಿಮೆ ಪ್ರಮಾಣದಲ್ಲಿ ಸುಟ್ಟಿದ್ದ ದೇಹಗಳನ್ನು ಗುರುತಿಸಿ ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಉಳಿದ 237 ದೇಹಗಳ ಕುಟುಂಬಸ್ಥರನ್ನು ಆಸ್ಪತ್ರೆಯ ಸಿಬ್ಬಂದಿ ಸಂಪರ್ಕಿಸಿದ್ದು ಅವರೆಲ್ಲ ಬಂದು ಡಿಎನ್ಎ ಸ್ಯಾಂಪಲ್ಗಳನ್ನು ನೀಡುತ್ತಿದ್ದಾರೆ. ಅವರು ನೀಡುವ ಸ್ಯಾಂಪಲ್ಗಳನ್ನು ಮೃತರ ದೇಹಗಳ ಡಿಎನ್ಎ ಜೊತೆ ಟೆಸ್ಟ್ ಮಾಡಿ ಮ್ಯಾಚ್ ಆದ ದೇಹಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಲಾಗುವುದು.
ಇದನ್ನೂ ಓದಿ: ವಿಮಾನ ದುರಂತ ಘಟನೆ ಹೃದಯವಿದ್ರಾವಕ: ಅಹಮದಾಬಾದ್ ಭೇಟಿ ಬಳಿಕ ಪ್ರಧಾನಿ ಮೋದಿ ಸಂದೇಶ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ

ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO

ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ

ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
