KSRTC ಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ವೇಗವಾಗಿ ಬಂದ ಬೊಲೆರೋ ಪಿಕ್-ಅಪ್ ಎದುರಿಗೆ ತೆರಳುತ್ತಿದ್ದ KSRTC ಬಸ್ಗೆ ಹಿಂದಿನಿಂದ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳ ಹಿಂದೆ ಅಪಘಾತ ನಡೆದಿದ್ದು, ಬೊಲೆರೋ ಪಿಕ್-ಅಪ್ ಚಾಲಕ ಪವಾಡಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us