ಬಾಂಬ್ ಇಟ್ಟವರು, ಯುವತಿಯನ್ನು ಸಾಯಿಸಿದವರು ಡಿಕೆ ಸಹೋದರರಿಗೆ ಎಮೋಶನಲ್ ಸಹೋದರರು: ಸಿಟಿ ರವಿ

|

Updated on: Apr 20, 2024 | 6:49 PM

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು, ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿದವರು, ನೇಹಾಳನ್ನು ಕೊಂದವರು, ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮನೆಗಳಿಗೆ ಬೆಂಕಿಯಿಟ್ಟವರೆಲ್ಲ ಕಾಂಗ್ರೆಸ್ ನಾಯಕರ ಭಾವನಾತ್ಮಕ ಸಹೋದರು ಎಂದು ರವಿ ಹೇಳಿದರು.

ಚಿಕ್ಕಮಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹಿರಿಯ ಬಿಜೆಪಿ ನಾಯಕ ಸಿಟಿ ರವಿ (CT Ravi) ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಡಿಕೆ ಸಹೋದರರ (DK brothers) ವಿರುದ್ಧ ವಾಗ್ದಾಳಿ ನಡೆಸಿದರು. ಶಿವಕುಮಾರ್ (Shivakumar) ಅವರ ರಕ್ತ ಹಂಚಿಕೊಂಡು ಹುಟ್ಟಿರುವ ಸಹೋದರ ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲುತ್ತಿದ್ದಾರೆ ಮತ್ತು ಅವರ ಎಮೋಶನಲ್ ಸಹೋದರರು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ರವಿ ಹೇಳಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು, ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿದವರು, ನೇಹಾಳನ್ನು ಕೊಂದವರು, ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮನೆಗಳಿಗೆ ಬೆಂಕಿಯಿಟ್ಟವರೆಲ್ಲ ಕಾಂಗ್ರೆಸ್ ನಾಯಕರ ಭಾವನಾತ್ಮಕ ಸಹೋದರು ಎಂದು ರವಿ ಹೇಳಿದರು. ನೇಹಾ ಹಿರೇಮಠ ಹತ್ಯೆ ವೈಯಕ್ತಿಕ ಕಾರಣಗಳಿಗೆ ಆಗಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಂತ ಮಾಧ್ಯಮದವರು ಹೇಳಿದಾಗ ರವಿ, ಸಿಎಂ ಹೇಳಿಕೆಗೆ ಕಾಂಗ್ರೆಸ್ ಕಾರ್ಪೋರೇಟರ್ ಅಗಿರುವ ನೇಹಾ ತಂದೆಯೇ ಉತ್ತರ ನೀಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ತಮಗೆ ತೋಚಿದ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಯಾಕೆಂದರೆ, ಈ ಘಟನೆ ಯಾರದ್ದೋ ಮನೆಯಲ್ಲಿ ನಡೆದಿದೆ, ಅವರ ಮನೆಗಳಲ್ಲಿ ನಡೆದಿದ್ದರೆ ಸಂಕಟ ಏನು ಅನ್ನೋದು ಅರ್ಥವಾಗುತಿತ್ತು ಎಂದು ರವಿ ಹೇಳಿದರು. ರಾಮನಮಿ ದಿನ ಅವನ್ಯಾವನೋ ಒಬ್ಬ ಜೈ ಶ್ರೀರಾಮ್ ಅನ್ನುತ್ತಿದ್ದವರಿಗೆ ಅಲ್ಲಾಹ್ ಓ ಅಕ್ಬರ್ ಅನ್ನು ಅಂತಾನಂತೆ, ಯಾವ ದೇಶದಲ್ಲಿ ನಾವಿದ್ದ್ದೇವೆ ಅಂತ ರವಿ ಖಾರವಾಗಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕರ್ನಾಟಕವನ್ನು ಅಪಾಯಕ್ಕೆ ದೂಡಿದ ಸಿದ್ದರಾಮಯ್ಯ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಬಿಜೆಪಿ ಆಕ್ರೋಶ

Follow us on