ಸಿಎಂ, ಡಿಸಿಎಂಗೆ ಜವಾಬ್ದಾರಿಯಿಂದ ಹೇಳಿಕೆ ಕೊಡಿ ಎಂದು ವಾರ್ನ್ ಕೊಟ್ಟ ಬೊಮ್ಮಾಯಿ; ಇಲ್ಲಿದೆ ವಿಡಿಯೋ

ತಮಿಳುನಾಡಿಗೆ ಕಾವೇರಿ(Cauvery) ನೀರು ಹರಿಸುತ್ತಿರುವ ವಿಚಾರ ಕುರಿತು ಸರ್ಕಾರ ಹೇಳಿಕೆ ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ(Basavaraj Bommai) ಹೇಳಿದರು.

ತುಮಕೂರು, ಸೆ.30: ತಮಿಳುನಾಡಿಗೆ ಕಾವೇರಿ(Cauvery) ನೀರು ಹರಿಸುತ್ತಿರುವ ವಿಚಾರ ಕುರಿತು ಸರ್ಕಾರ ಹೇಳಿಕೆ ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ(Basavaraj Bommai) ಹೇಳಿದರು. ಸರ್ಕಾರ ತನ್ನ ಸ್ಥಾನ ಮತ್ತು ಅಧಿಕಾರಕ್ಕೆ ಹೆದರಿಕೊಂಡಿದ್ದರೆ, ಅದು ಸುಪ್ರೀಂಕೋರ್ಟ್​ ಮೇಲೆ ಯಾವ ರೀತಿಯ ಪರಿಣಾಮ ಬಿರುತ್ತೆ ಇವರಿಗೆ ಗೊತ್ತಿಲ್ಲ. ಇನ್ನು ಸರ್ಕಾರಕ್ಕೆ ಕಾವೇರಿ ಗಲಾಟೆ ಪರಿಸ್ಥಿತಿ, ಬದ್ಧತೆ ಬಗ್ಗೆ ಗೊತ್ತಿಲ್ಲದೆ ಇಂತಹ ಹೇಳಿಕೆ ನೀಡುವುದರಿಂದ ಕರ್ನಾಟಕದ ಜನತೆಗೆ ಪೆಟ್ಟು ಬೀಳುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಮಾತನಾಡುವಾಗ ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ನೀಡಲಿ ಎಂದು ಕಿವಿ ಮಾತು ಹೇಳುವುದಕ್ಕೆ ಇಷ್ಟಪಡುತ್ತೇನೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us