‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ಈ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯಮಾಲಾ ಅವರು ನಮಗೆ ನೋಟಿಸ್ ನೀಡಿದ್ದಾರೆ. ಅದಕ್ಕೂ ಬಾಸ್ ಸಿನಿಮಾ ವಿವಾದಕ್ಕೂ ಸಂಬಂಧ ಇಲ್ಲ’ ಎಂದು ನಿರ್ದೇಶಕ ಲವ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ‘ಬಾಸ್’ ಸಿನಿಮಾದ ನಾಯಕ ನಟ ತನುಷ್ ಶಿವಣ್ಣ ಕೂಡ ಭಾಗಿಯಾಗಿದ್ದರು. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
