‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ

Edited By:

Updated on: Mar 16, 2026 | 8:10 PM

ತನುಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರಕ್ಕೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ.

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾಗೆ (Boss Movie) ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ (Darshan) ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಯಾವುದೇ ನೋಟಿಸ್ ಬಂದಿಲ್ಲ. 3-4 ಜನರು ನನಗೆ ಬೆದರಿಕೆ ಕರೆ ಮಾಡಿದ್ದಾರೆ. ನಾನು ಅದನ್ನು ಗಮನಕ್ಕೆ ತೆಗೆದುಕೊಂಡಿಲ್ಲ. ದರ್ಶನ್ ಅವರ ರಿಯಲ್ ಸ್ಟೋರಿ ಇಟ್ಟುಕೊಂಡು ನಾವು ಸಿನಿಮಾ ಮಾಡಿಲ್ಲ. ರೇಣುಕಾಸ್ವಾಮಿ ಘಟನೆ ಕೂಡ ಈ ಸಿನಿಮಾದಲ್ಲಿ ಇಲ್ಲ. ಕಾಕತಾಳೀಯವಾಗಿ ಹೋಲಿಕೆ ಆಗಿರಬಹುದು ಅಷ್ಟೇ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಆ ಘಟನೆ ಇಟ್ಟುಕೊಂಡು ನಾವು ಸಿನಿಮಾ ಮಾಡೋಕೆ ಆಗಲ್ಲ. ವಕೀಲನಾಗಿ ನನಗೆ ಅದು ಗೊತ್ತು. ನಮಗೆ ನೋಟಿಸ್ ಬಂದರೆ ಅದಕ್ಕೆ ಉತ್ತರ ನೀಡುತ್ತೇವೆ’ ಎಂದು ಲವ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us