AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ; ಬೇಸರ ಹೊರಹಾಕಿದ ನಿರ್ದೇಶಕ

‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ; ಬೇಸರ ಹೊರಹಾಕಿದ ನಿರ್ದೇಶಕ

ಮಂಗಳ ರಾಜಗೋಪಾಲ್​
| Edited By: |

Updated on: Jun 18, 2026 | 8:28 AM

Share

‘ಬಾಸ್’ ಹೆಸರಿನ ಸಿನಿಮಾ ಸದ್ಯ ಸ್ಯಾಂಡಲ್​​ವುಡ್​​ನಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾ ಶೀಘ್ರವೇ ರಿಲೀಸ್ ಆಗಬೇಕಿತ್ತು. ಆದರೆ, ಇದರ ರಿಲೀಸ್​​ಗೆ ತಂಡ ಅಪಸ್ವರ ತೆಗೆದಿದೆ. ಈ ಸಿನಿಮಾಗೆ ಭಾರೀ ವಿರೋಧ ವ್ಯಕ್ತವಾಗಿದೆ ಎಂದು ವರದಿ ಆಗಿದೆ. ಈ ಬಗ್ಗೆ ನಿರ್ದೇಶಕರು ಬೇಸರ ಹೊರಹಾಕಿದ್ದಾರೆ. ನಮ್ಮ ಸಿನಿಮಾ ರಿಲೀಸ್​​ಗೆ ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಅವರು ಹೇಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಿಲೀಸ್ ಆಗಬಾರದು ಎಂದು ವಿಜಯಲಕ್ಷ್ಮೀ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಿನಿಮಾದ ಕಥೆ ರೇಣುಕಾಸ್ವಾಮಿ ಕೊಲೆ ಕೇಸ್ ಆಧರಿಸಿದೆ ಎಂಬ ಅನುಮಾನ ಇದೆ. ಈ ಕಾರಣಕ್ಕೆ ರಿಲೀಸ್​​ಗೆ ವಿರೋಧ ಇದೆ. ಈ ವಿಷಯವಾಗಿ ಸಿನಿಮಾದ ನಿರ್ದೇಶಕ ಲವ ಬೇಸರ ಹೊರಹಾಕಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್​​ನಲ್ಲಿ ‘ಬಾಸ್’ ಸಿನಿಮಾಗೆ ತಡೆ ಕೋರಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ ಅರ್ಜಿ ವಜಾಗೊಂಡಿತ್ತು. ಅದರಿಂದ ಚಿತ್ರತಂಡಕ್ಕೆ ಬಲ ಸಿಕ್ಕಂತೆ ಆಗಿತ್ತು.ಈಗ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದ ತಂಡ ಚಿಂತೆಗೆ ಒಳಗಾಗಿದೆ. ಈ ಬಗ್ಗೆ ಅವು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ 

Follow Us