ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ

Updated on: May 02, 2026 | 12:14 PM

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕುಸಿದ ಗೋಡೆ ಏಳು ಮಂದಿಯ ಸಾವಿಗೆ ಕಾರಣವಾಗಿತ್ತು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಹಾಗೂ ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಕರ್ತವ್ಯ ಲೋಪಕ್ಕಾಗಿ ಅಮಾನತಾಗಿದ್ದಾರೆ.

ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಮತ್ತು ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಘಟನೆಯ ಕುರಿತು ತನಿಖೆಗೂ ಆದೇಶಿಸಲಾಗಿತ್ತು.

ಮಳೆಯಿಂದ ರಕ್ಷಣೆ ಪಡೆಯಲು ಗೋಡೆಯ ಪಕ್ಕದಲ್ಲಿ ನಿಂತಿದ್ದವರ ಮೇಲೆ ಕಾಂಪೌಂಡ್ ಕುಸಿದು ಬಿದ್ದಿತ್ತು. ಕಾಂಪೌಂಡ್ ಬದಿಯಲ್ಲಿ ಹಾಕಿದ್ದ ಮಣ್ಣಿನ ಒತ್ತಡ ತಡೆಯಲಾಗದೆ ಗೋಡೆ ಕುಸಿದಿತ್ತು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us