ಚುನಾವಣೆಯಲ್ಲಿ ಸೋತ ಸಿಟಿ ರವಿಗೆ ಧೈರ್ಯ ತುಂಬಿದ ಬಾಲಕ: ವಿಡಿಯೋ ವೈರಲ್

|

Updated on: May 14, 2023 | 2:58 PM

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಟಿ ರವಿ 20 ವರ್ಷಗಳ ಬಳಿಕ ಮೊದಲ ಬಾರಿಗೆ ಸೋತಿದ್ದಾರೆ. ಈ ವೇಳೆ ಬಾಲಕನೊಬ್ಬ ಅವರ ನಿವಾಸಕ್ಕೆ ಭೇಟಿ ನೀಡಿ ‘ ನೀವು ಭಯ ಪಡಬೇಡಿ, ಬಿಜೆಪಿ ಜೊತೆ ನಾವು ಇರ್ತೇವಿ ಎಂದಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಚಿಕ್ಕಮಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ(Karnataka Assembly Elections 2023 Result)ನಿನ್ನೆ(ಮೇ.13) ಹೊರಬಿದ್ದಿದ್ದು, 137 ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ. ಅದರಂತೆ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಟಿ ರವಿ 20 ವರ್ಷಗಳ ಬಳಿಕ ಮೊದಲ ಬಾರಿಗೆ ಸೋತಿದ್ದಾರೆ. ಹೌದು ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಈ ಬಾರಿ ಗೆಲುವು ಸಾಧಿಸಿದ್ದಾರೆ. ಈ ಮಧ್ಯೆ ಸಿ.ಟಿ ರವಿ ನಿವಾಸಕ್ಕೆ ಬಾಲಕ ಭೇಟಿ ನೀಡಿ ಧೈರ್ಯ ತುಂಬಿದ್ದಾನೆ. ಹೌದು ‘ಸರ್ ನಿಮ್ಮ ಜೊತೆ ನಾವಿರ್ತೇವೆ, ನಾವು ಬಿಜೆಪಿ ಜೊತೆ ಇರ್ತೇವಿ, ನೀವು ಭಯ ಪಡಬೇಡಿ ಎನ್ನುವ ಮೂಲಕ ಬಾಲಕ ಧೈರ್ಯ ತುಂಬಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on