ನಿಗದಿತ ಮಿತಿಗಿಂತ ಅದಾಯ ಜಾಸ್ತಿಯಿರುವ ಕುಟುಂಬಗಳ ಬಿಪಿಎಲ್ ಕಾರ್ಡುಗಳು ಮಾತ್ರ ರದ್ದಾಗಿವೆ: ಸಂತೋಷ್ ಲಾಡ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2024 | 5:21 PM

ಕಾಂಗ್ರೆಸ್ ಶಾಸಕ ಗವಿಯಪ್ಪ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತಾಡಿದ ಸಚಿವ ಲಾಡ್, ಅನುದಾನ ನೀಡಿಲ್ಲ ಅಂತೇನಿಲ್ಲ, ಆದರೆ ಹೆಚ್ಚುವರಿ ಅನುದಾನ ನೀಡಿಲ್ಲ, ಕೆಲಸಗಳು ನಡೆಯುತ್ತಿವೆ ಮತ್ತು ಜಾರಿಯಲ್ಲಿದ್ದ ಕಾಮಗಾರಿಗಳ ಕೆಲಸ ಮುಂದುವರಿದಿದೆ ಎಂದರು.

ಬೆಂಗಳೂರು: ಕುಟುಂಬ ಯಾವುದೇ ಅಗಿರಲಿ, ಕಾರು ಹೊಂದಿರಲ್ಲಿ ಅಥವಾ ಹೊಂದಿಲ್ಲದಿರಲಿ ಅವರ ಆದಾಯ ನಿಗದಿಪಡಿಸಿರುವ ಮಿತಿಗಿಂತ ಜಾಸ್ತಿಯಿದ್ದರೆ ಅಂಥ ಕುಟುಂಬಗಳ ಬಿಪಿಎಲ್ ಕಾರ್ಡ್ ತಾನಾಗಿಯೇ ರದ್ದಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಹಣದ ಕೊರತೆ ಅಂತ ಪರಿಷ್ಕರಣೆ ನಡೆಯುತ್ತಿಲ್ಲ, ಕಾರ್ಮಿಕ ಇಲಾಖೆಯಲ್ಲಿ ₹ 8,500 ಕೋಟಿಯಿದೆ, ತಮ್ಮ ಇಲಾಖೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗಿಂತ ಕಾರ್ಮಿಕರಲ್ಲದವರು, ಲಾರಿಗಳ ಮಾಲೀಕರು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದಾರೆ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿನೋಟಿಫಿಕೇಷನ್ ಪ್ರಕರಣದಲ್ಲಿ ಈಡಿ ಕುಮಾರಸ್ವಾಮಿಗೆ ಯಾಕೆ ನೋಟೀಸ್ ನೀಡಿಲ್ಲ? ಸಂತೋಷ್ ಲಾಡ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.