Bigg Boss Kannada: ‘ನೋಡಪ್ಪ.. ಕೇಳಯ್ಯ ಇಲ್ಲಿ’: ಬಿಗ್​ ಬಾಸ್​ಗೆ ಏಕವಚನದಲ್ಲಿ ಮಾತನಾಡಿಸಿದ ಬ್ರಹ್ಮಾಂಡ ಗುರೂಜಿ

Bigg Boss Kannada: ‘ನೋಡಪ್ಪ.. ಕೇಳಯ್ಯ ಇಲ್ಲಿ’: ಬಿಗ್​ ಬಾಸ್​ಗೆ ಏಕವಚನದಲ್ಲಿ ಮಾತನಾಡಿಸಿದ ಬ್ರಹ್ಮಾಂಡ ಗುರೂಜಿ
|

Updated on: Nov 21, 2023 | 1:38 PM

ಎಲ್ಲ ಸ್ಪರ್ಧಿಗಳು ಬಿಗ್​ ಬಾಸ್​ಗೆ ಬಹಳ ಗೌರವ ನೀಡುತ್ತಾರೆ. ಆದರೆ ಬ್ರಹ್ಮಾಂಡ ಗುರೂಜಿ ಅವರ ವರಸೆಯೇ ಬೇರೆ. ‘ನೋಡಪ್ಪ ಬಿಗ್​ ಬಾಸು.. ಕೇಳಯ್ಯ ಇಲ್ಲಿ.. ನನಗೆ ಓಡಾಡೋಕೆ ಆಗಲ್ಲ. ಈಗಲೇ ಹೇಳಿದೀನಿ. ಎಲ್ಲರನ್ನೂ ಒಂದು ಕಡೆ ಕೂರಿಸು’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ಫನ್ನಿ ವಿಡಿಯೋ ಇಲ್ಲಿದೆ ನೋಡಿ..

ನರೇಂದ್ರ ಬಾಬು ಶರ್ಮಾ ಅಲಿಯಾಸ್​ ಬ್ರಹ್ಮಾಂಡ ಗುರೂಜಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 10’ (Bigg Boss Kannada) ಶೋಗೆ ಕಾಲಿಟ್ಟಿದ್ದಾರೆ. ಅತಿಥಿಯಾಗಿ ಬಂದಿರುವ ಅವರಿಗೂ ಬಿಗ್​ ಬಾಸ್​ನಲ್ಲಿ ಟಾಸ್ಕ್​ ನೀಡಲಾಗಿದೆ. ದೊಡ್ಮನೆಯೊಳಗಿನ ಸದಸ್ಯರಿಗೆ ಆಗಾಗ ಬಿಗ್​ ಬಾಸ್​ (Bigg Boss) ಕಡೆಯಿಂದ ಆದೇಶ ಬರುತ್ತದೆ. ಎಲ್ಲರೂ ಬಿಗ್​ ಬಾಸ್​ಗೆ ಬಹಳ ಗೌರವ ನೀಡುತ್ತಾರೆ. ‘ಕೇಳಿ, ನೋಡಿ, ಕಳಿಸಿ’ ಎಂದೆಲ್ಲ ಬಹುವಚನದಲ್ಲಿ ಗೌರವದಿಂದ ಸ್ಪರ್ಧಿಗಳು ಮಾತನಾಡುತ್ತಾರೆ. ಆದರೆ ಬ್ರಹ್ಮಾಂಡ ಗುರೂಜಿ ಅವರ ವರಸೆಯೇ ಬೇರೆ. ಸೋಮವಾರದ (ನ.20) ಎಪಿಸೋಡ್​ನಲ್ಲಿ ಅವರಿಗೆ ಒಂದು ಟಾಸ್ಕ್​ ನೀಡಲಾಗಿತ್ತು. ಆ ವೇಳೆ ಅವರು ಕ್ಯಾಮೆರಾ ಇರುವಲ್ಲಿಗೆ ಬಂದು ಬಿಗ್​ ಬಾಸ್​ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ‘ನೋಡಪ್ಪ ಬಿಗ್​ ಬಾಸು.. ಕೇಳಯ್ಯ ಇಲ್ಲಿ.. ನನಗೆ ಓಡಾಡೋಕೆ ಆಗಲ್ಲ. ಈಗಲೇ ಹೇಳಿದೀನಿ. ಎಲ್ಲರನ್ನೂ ಒಂದು ಕಡೆ ಕೂರಿಸು’ ಎಂದು ಬ್ರಹ್ಮಾಂಡ ಗುರೂಜಿ (Brahmanda Guruji) ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಶೋ ಬಿತ್ತರ ಆಗುತ್ತದೆ. ‘ಜಿಯೋ ಸಿನಿಮಾ’ದಲ್ಲಿ ಉಚಿತವಾಗಿ 24 ಗಂಟೆಯೂ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ