ಮೆದುಳು ತಿನ್ನೋ ಅಮೀಬಾ ವೈರಸ್: ಚಾಮರಾಜನಗರದಲ್ಲಿ ಹೈ ಅಲರ್ಟ್, ಜಾಗೃತಿ ಕಾರ್ಯ
ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ, ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಿದೆ. ಗುಂಡ್ಲುಪೇಟೆ ಚೆಕ್ಪೋಸ್ಟ್ನಲ್ಲಿ ಶಬರಿಮಲೆ ಯಾತ್ರಾರ್ಥಿಗಳಿಗೆ ರೋಗದ ಕುರಿತು ಜಾಗೃತಿ ಮೂಡಿಸಿ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮಾರ್ಗಸೂಚಿಗಳನ್ನು ವಿತರಿಸಲಾಗುತ್ತಿದೆ.
ಚಾಮರಾಜನಗರ, ನವೆಂಬರ್ 24: ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಗಡಿಭಾಗದಲ್ಲಿ, ವಿಶೇಷವಾಗಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಈ ರೋಗದ ಕುರಿತು ಮಾಹಿತಿ ನೀಡಲಾಗುತ್ತಿದೆ. ಗುಂಡ್ಲುಪೇಟೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಲೀಂ ಪಾಷಾ ಬಿ.ಆರ್. ಅವರ ಪ್ರಕಾರ, ಇದು ನೈಗ್ಲೇರಿಯಾ ಫೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆಯಾಗಿದೆ ಮತ್ತು ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ತಂಡಗಳು ಈ ಜಾಗೃತಿ ಕಾರ್ಯದಲ್ಲಿ ನಿರತವಾಗಿವೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
