Video: ಶಬರಿಮಲೆ ಯಾತ್ರೆ ಆರಂಭ, ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾ ಸೋಂಕಿನ ಭೀತಿ, ಮಾರ್ಗಸೂಚಿ ಬಿಡುಗಡೆ

Updated on: Nov 17, 2025 | 9:04 AM

ಇಂದಿನಿಂದ ಶಬರಿಮಲೆ(Sabarimala) ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಮಧ್ಯರಾತ್ರಿ 3 ಗಂಟೆಗೆ ದೇಗುಲ ಬಾಗಿಲು ತೆರೆದಿದ್ದು, ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದೆ. ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಕಾಡುತ್ತಿದೆ.

ಶಬರಿಮಲೆ, ನವೆಂಬರ್ 17: ಇಂದಿನಿಂದ ಶಬರಿಮಲೆ(Sabarimala) ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಮಧ್ಯರಾತ್ರಿ 3 ಗಂಟೆಗೆ ದೇಗುಲ ಬಾಗಿಲು ತೆರೆದಿದ್ದು, ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದೆ. ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಕಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನದಿಯಲ್ಲಿ ತೀರ್ಥಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರ ವಹಿಸಲು, ಕುಡಿಯಲು ಬಿಸಿ ನೀರನ್ನು ಬಳಸಲು, ಆಗಾಗ ಕೈಗಳನ್ನು ನೀರಿನಿಂದ ತೊಳೆದುಕೊಳ್ಳುವಂತೆ ಮತ್ತು ತೊಳೆದ ಹಣ್ಣುಗಳನ್ನು ಸೇವಿಸಲು ಸೂಚಿಸಲಾಗಿದೆ. ಅಲ್ಲದೆ, ಬೆಟ್ಟ ಹತ್ತುವಾಗ ಆಗಾಗ ವಿಶ್ರಾಂತಿ ಪಡೆಯುವಂತೆ ಮತ್ತು ಶೌಚಾಲಯಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ.

ಇದರ ಜೊತೆಗೆ, ದೇಗುಲದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಶಬರಿಮಲೆಗೆ ಭೇಟಿ ನೀಡಿದೆ. ಕೋರ್ಟ್ ಸೂಚನೆಯಂತೆ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಫಲಕಗಳ ವೈಜ್ಞಾನಿಕ ಪರೀಕ್ಷೆ ನಡೆಯಲಿದೆ. ಶುದ್ಧತೆ, ಗುಣಮಟ್ಟ ಹಾಗೂ ತೂಕದ ಪರಿಶೀಲನೆ ನಡೆಸಲಾಗುತ್ತದೆ. ಫಲಕಗಳ ಮೇಲ್ಮೈ ವಿಸ್ತೀರ್ಣವನ್ನು ಅಳೆಯುವ ಜೊತೆಗೆ, ದ್ವಾರಪಾಲಕ ಮೂರ್ತಿಗಳ ಕವಚಗಳು ಮತ್ತು ಬಾಗಿಲಿನ ಚೌಕಟ್ಟುಗಳ ತಾಮ್ರದ ಮಾದರಿಗಳನ್ನು ಸಹ ಸಂಗ್ರಹಿಸಲಾಗುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More