ಬೆಂಕಿಗೆ ಆಹುತಿಯಾಗುತ್ತಿದ್ದ ಮನೆಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ರಕ್ಷಿಸಿದ ಕೆಚ್ಚೆದೆಯ ಟ್ರಾಫಿಕ್ ಕಾನ್‌ಸ್ಟೆಬಲ್‌, ವಿಡಿಯೋ ನೋಡಿ

ಸಾಧು ಶ್ರೀನಾಥ್​

Updated on: Dec 22, 2023 | 1:38 PM

ಈ ಮಧ್ಯೆ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಬೆಂಕಿ ಅವಘಡದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೈದರಾಬಾದ್: ಪಂಜಗುಟ್ಟಾ ಟ್ರಾಫಿಕ್ ಠಾಣೆಯ ಟ್ರಾಫಿಕ್ ಕಾನ್‌ಸ್ಟೆಬಲ್‌ಯೊಬ್ಬರು ಸಮಯೋಚಿತವಾಗಿ ಸ್ಪಂದಿಸಿದ್ದು, ಬೆಂಕಿಗೆ ಆಹುತಿಯಾಗಿದ್ದ ಮನೆಯೊಳಗೆ ಸಿಲುಕಿದ್ದ ಒಂದೇ ಕುಟುಂಬದ ಆರು ಮಂದಿಯನ್ನು ರಕ್ಷಿಸಿದ್ದಾರೆ. ವರದಿಗಳ ಪ್ರಕಾರ, ಹೈದರಾಬಾದ್‌ನ ಪಂಜಗುಟ್ಟಾ ಪ್ರದೇಶದ ಅಪಾರ್ಟ್ಮೆಂಟ್ ಸಂಕೀರ್ಣದ ಆರನೇ ಮಹಡಿಯಲ್ಲಿರುವ ಪೆಂಟ್‌ಹೌಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕಟ್ಟಡದಲ್ಲಿ ತಂಗಿದ್ದ ಜನರು ತಮ್ಮ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಂಜಗುಟ್ಟ ಸಂಚಾರ ಪೊಲೀಸ್ ಪೇದೆ ಶರಣ್ ಕುಮಾರ್ ಸ್ಥಳಕ್ಕೆ ಧಾವಿಸಿ ಡಂಬೆಲ್ ಬಳಸಿ ಬಾಗಿಲು ಒಡೆದಿದ್ದಾರೆ. ಕಾನ್‌ಸ್ಟೆಬಲ್ ಮನೆಯಿಂದ ಜನರನ್ನು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮನೆಯೊಳಗೆ ಸಿಲುಕಿಕೊಂಡಿದ್ದ ಆರು ಮಂದಿಯನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ.

Also Read: ಉಚಿತ ಬಸ್ ಪ್ರಯಾಣದ ಎಫೆಕ್ಟ್! ಆ ಪುರುಷ ಪ್ರಯಾಣಿಕ ಕಂಡಕ್ಟರ್ ಕೆನ್ನೆ ಕಚ್ಚಿಬಿಟ್ಟ, ಯಾಕೆ ಗೊತ್ತಾ?

ಈ ಮಧ್ಯೆ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಬೆಂಕಿ ಅವಘಡದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಗೆ ಕಾರಣವೇನು ಎಂದು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು