AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಡೇಶ್ವರದಲ್ಲಿ ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!

ಮುರುಡೇಶ್ವರದಲ್ಲಿ ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!

ಭಾವನಾ ಹೆಗಡೆ
| Edited By: |

Updated on:Jul 13, 2026 | 2:17 PM

Share

ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ಉದ್ಯೋಗಿಯೊಬ್ಬರ ಸಾಹಸ ಮತ್ತು ಸಮಯಪ್ರಜ್ಞೆಯಿಂದಾಗಿ ಭೀಕರ ರೈಲು ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕೇರಳದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ರೈಲೊಂದು ಮುರುಡೇಶ್ವರ ನಿಲ್ದಾಣದಿಂದ ಹೊರಡುವಾಗ, 22 ವರ್ಷದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಯತ್ನಿಸಿದ್ದಾನೆ. ಈ ವೇಳೆ ಆತ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್ ಹಾಗೂ ರೈಲಿನ ನಡುವಿನ ಗ್ಯಾಪ್‌ನಲ್ಲಿ ಬೀಳಲು ಹೋಗಿದ್ದಾನೆ. ಇದನ್ನು ತಕ್ಷಣ ಗಮನಿಸಿದ ಅಲ್ಲೇ ಕರ್ತವ್ಯದಲ್ಲಿದ್ದ ಕೊಂಕಣ ರೈಲ್ವೆಯ ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್, ಮಿಂಚಿನ ವೇಗದಲ್ಲಿ ಧಾವಿಸಿ ಯುವಕನನ್ನು ಹಿಂದಕ್ಕೆ ಎಳೆದು ಪ್ರಾಣ ಉಳಿಸಿದ್ದಾರೆ.

ಉತ್ತರ ಕನ್ನಡ, ಜುಲೈ 13: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ಉದ್ಯೋಗಿಯೊಬ್ಬರ ಸಾಹಸ ಮತ್ತು ಸಮಯಪ್ರಜ್ಞೆಯಿಂದಾಗಿ ಭೀಕರ ರೈಲು ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕೇರಳದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ರೈಲೊಂದು ಮುರುಡೇಶ್ವರ ನಿಲ್ದಾಣದಿಂದ ಹೊರಡುವಾಗ, 22 ವರ್ಷದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಯತ್ನಿಸಿದ್ದಾನೆ. ಈ ವೇಳೆ ಆತ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್ ಹಾಗೂ ರೈಲಿನ ನಡುವಿನ ಗ್ಯಾಪ್‌ನಲ್ಲಿ ಬೀಳಲು ಹೋಗಿದ್ದಾನೆ. ಇದನ್ನು ತಕ್ಷಣ ಗಮನಿಸಿದ ಅಲ್ಲೇ ಕರ್ತವ್ಯದಲ್ಲಿದ್ದ ಕೊಂಕಣ ರೈಲ್ವೆಯ ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್, ಮಿಂಚಿನ ವೇಗದಲ್ಲಿ ಧಾವಿಸಿ ಯುವಕನನ್ನು ಹಿಂದಕ್ಕೆ ಎಳೆದು ಪ್ರಾಣ ಉಳಿಸಿದ್ದಾರೆ.

ಈ ರೋಮಾಂಚಕ ರಕ್ಷಣೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಗಣಪತಿ ನಾಯ್ಕ್ ಅವರ ಈ ಶ್ಲಾಘನೀಯ ಸಾಹಸವನ್ನು ಗುರುತಿಸಿ ಕೊಂಕಣ ರೈಲ್ವೆ ಮಂಡಳಿಯು 10,000 ರೂಪಾಯಿ ನಗದು ಬಹುಮಾನ ನೀಡಿ ಗೌರವಿಸಿದೆ.

Source: Konkan railway X account

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 13, 2026 01:30 PM

Follow Us