ತಾಳಿ ಕಟ್ಟುತಿದ್ದಂತೆ ವಧುವನ್ನು ಪರೀಕ್ಷೆ ಕೇಂದ್ರಕ್ಕೆ ಕರೆತಂದ ವರ, ಮದುವೆ ಉಡುಗೆಯಲ್ಲೇ ಪರೀಕ್ಷೆ

ಶಿವಮೊಗ್ಗದ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಸತ್ಯವತಿ ಅವರು ಬೆಳಗ್ಗೆ ಮಾಂಗಲ್ಯಧಾರಣೆ ಮಾಡಿಸಿಕೊಂಡು ಬಳಿಕ ಸಿದಾ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ. ಇನ್ನು ವಿಶೇಷವೆಂದರೆ ನವ ವರ ತನ್ನ ಹೆಂಡತಿಯನ್ನ ಪರೀಕ್ಷಾ ಕೇಂದ್ರದವರೆಗೆ ಬಂದು ಬಿಟ್ಟು ಹೋಗಿದ್ದಾರೆ. ನವವಧು ಪರೀಕ್ಷೆ ಬರೆದು ಮತ್ತೆ ಕಲ್ಯಾಣ ಮಂಟಪಕ್ಕೆ ತೆರಳಲಿದರು. ಪರೀಕ್ಷೆ ಮುಗಿದ ನಂತರ ಮುಂದಿನ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ್ದಾರೆ.

| Edited By: ರಮೇಶ್ ಬಿ. ಜವಳಗೇರಾ

Updated on:Sep 10, 2023 | 3:57 PM

ಶಿವಮೊಗ್ಗ, ಸೆ.10: ಮದುವೆ ಅಂದರೆ ಜೀವನದಲ್ಲಿ ಒಂದು ಬಾರಿ ಬರುವ ಅಮೃತ ಘಳಿಗೆ. ಹೀಗಾಗಿ ಮದುವೆ ದಿನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತೆ. ಅಲ್ಲದೆ ಮದುವೆಯ ಹಿಂದಿನ ಕೆಲ ದಿನಗಳು ಮತ್ತು ಮದುವೆಯ ದಿನದಂದು ದಂಪತಿಗೆ ಯಾವುದೇ ಇನ್ನಿತರ ಕೆಲಸಗಳನ್ನು ಮಾಡಲು ಬಿಡುವುದಿಲ್ಲ. ವಧು ಮಂಟಪದಿಂದ ಸೀದಾ ವರನ ಮನೆಗೆ ಕಾಲಿಡಬೇಕು ಎಂಬ ಸಂಪ್ರದಾಯವೂ ಕೆಲ ಕಡೆ ಇದೆ. ಆದರೆ ಇಲ್ಲೊಬ್ಬ ವಧು ಮದುವೆ ಮಂಟಪದಿಂದಲೇ ಪರೀಕ್ಷೆ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಿದ್ದಾರೆ.

ಶಿವಮೊಗ್ಗದ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಸತ್ಯವತಿ ಅವರು ಬೆಳಗ್ಗೆ ಮಾಂಗಲ್ಯಧಾರಣೆ ಮಾಡಿಸಿಕೊಂಡು ಬಳಿಕ ಸಿದಾ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ. ಇನ್ನು ವಿಶೇಷವೆಂದರೆ ನವ ವರ ತನ್ನ ಹೆಂಡತಿಯನ್ನ ಪರೀಕ್ಷಾ ಕೇಂದ್ರದವರೆಗೆ ಬಂದು ಬಿಟ್ಟು ಹೋಗಿದ್ದಾರೆ. ನವವಧು ಪರೀಕ್ಷೆ ಬರೆದು ಮತ್ತೆ ಕಲ್ಯಾಣ ಮಂಟಪಕ್ಕೆ ತೆರಳಲಿದರು. ಪರೀಕ್ಷೆ ಮುಗಿದ ನಂತರ ಮುಂದಿನ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ್ದಾರೆ. ಇಂದು ಎಕನಾಮಿಕ್ಸ್ ಪರೀಕ್ಷೆ ಹಿನ್ನೆಲೆ ಪರೀಕ್ಷೆ ತಪ್ಪಿಸಿಕೊಳ್ಳಲಾಗದೆಂದು ತಾಳಿ ಕಟ್ಟು ತಿದ್ದಂತೆ ನವ ವರ ವಧುವನ್ನು ಕಮಲಾ ನೆಹರು ಕಾಲೇಜಿನ ಪರೀಕ್ಷೆ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು ಪರೀಕ್ಷೆ ಮುಗಿಯುತ್ತಿದ್ದಂತೆ ವಾಪಾಸ್ ಮಂಟಪಕ್ಕೆ ಹೋಗಿ ಮುಂದಿನ ಶಾಸ್ತ್ರಗಳನ್ನು ಮಾಡಿದ್ದಾರೆ.

ಚೆನ್ನೈ ಮೂಲದ ಪ್ರಿಯಕರ ಫ್ರಾನ್ಸಿಸ್ ನೊಂದಿಗೆ ಸತ್ಯವತಿ ಅವರು ಮನೆಯಲ್ಲೇ ಸರಳ ವಿವಾಹವಾದರು. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಫ್ರಾನ್ಸಿಸ್, ಎಂಜಿನಯರ್ ಪದವೀಧರ. ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾದ ಇವರು ಇನ್ಸ್ಟಾಗ್ರಾಮ್​ನಲ್ಲಿ ಎರಡು ವರ್ಷ ಚಾಟಿಂಗ್ ಮಾಡುತ್ತ ಪ್ರೀತಿಗೆ ಜಾರಿದ್ದರು. ಸದ್ಯ ಹಿರಿಯರಿಗೆ ಒಪ್ಪಿಸಿ ಸರಳ ವಿವಾಹವಾದರು.

Published On - 12:19 pm, Sun, 10 September 23

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ