ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಿ ದುರಂತ ಅಂತ್ಯಕಂಡ ಸಹೋದರರು
ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ಕಾಪಾಡಲು ಹೋದ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ಮೈಸೂರಿನ ಬಡಗಲಹುಂಡಿಯ ಉಪನಾಲೆಯಲ್ಲಿ ನಡೆದಿದೆ. ಬಡಗಲಹುಂಡಿ ಗ್ರಾಮದ ರಮೇಶ್ ಮಗನಾದ ನವವಿವಾಹಿತ ನಂದನ್ (25), ರಮೇಶ್ ಸಹೋದರನ ಪುತ್ರ ರಾಕೇಶ್ (20) ಜೀವ ಕಳೆದುಕೊಂಡವರು. ಈ ಇಬ್ಬರು ಸಹೋದರರ ಮಕ್ಕಳು ಆಗಿದ್ದಾರೆ.
ಮೈಸೂರು, (ಅಕ್ಟೋಬರ್ 26): ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ಕಾಪಾಡಲು ಹೋದ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ಮೈಸೂರಿನ ಬಡಗಲಹುಂಡಿಯ ಉಪನಾಲೆಯಲ್ಲಿ ನಡೆದಿದೆ. ಬಡಗಲಹುಂಡಿ ಗ್ರಾಮದ ರಮೇಶ್ ಮಗನಾದ ನವವಿವಾಹಿತ ನಂದನ್ (25), ರಮೇಶ್ ಸಹೋದರನ ಪುತ್ರ ರಾಕೇಶ್ (20) ಜೀವ ಕಳೆದುಕೊಂಡವರು. ಈ ಇಬ್ಬರು ಸಹೋದರರ ಮಕ್ಕಳು ಆಗಿದ್ದಾರೆ. ಮಂಜು ಎನ್ನುವ ಬಾಲಕ ವರಣ ನಾಲೆಯಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮಂಜು ಮುಳುಗುತ್ತಿರುವುದನ್ನು ಸಹೋದರರಿರಬ್ಬರು ನೋಡಿದ್ದರು. ಗೊಬ್ಬರ ತೆಗೆದುಕೊಂಡು ನಾಲೆಯ ಮೇಲ್ಭಾಗದಲ್ಲಿ ಹೋಗುತ್ತಿದ್ದ ಸಹೋದರರು ತಕ್ಷಣ ನೀರಿಗೆ ಹಾರಿ ಮುಳುಗುತ್ತಿದ್ದವನನ್ನ ರಕ್ಷಣೆ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ನಂದನ್ ಹಾಗೂ ರಾಕೇಶ್ ನೀರು ಪಾಲಾಗಿದ್ದಾರೆ. ಮೃತ ನಂದನ್, ರಾಕೇಶ್ ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು ಸಂಬಂಧದಲ್ಲಿ ಸಹೋದರರಾಗಿದ್ದರು. ಇದೀಗ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
