Karnataka Assembly Polls; ಹಾಸನ ಜಿಲ್ಲೆಯಲ್ಲಿ ಪ್ರಚಾರಕ್ಕಾಗಿ ಕಡುಗೆಂಪು ವರ್ಣದ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಬಿಎಸ್ ಯಡಿಯೂರಪ್ಪ

Updated on: May 05, 2023 | 1:24 PM

ಹೆಲಿಪ್ಯಾಡ್ ನಲ್ಲಿ ಚಾಪರ್ ಲ್ಯಾಂಡ್ ಆಗಿ ಯಡಿಯೂರಪ್ಪ ಕೆಳಗಿಳಿದ ಬಳಿಕ ಅವರಿಗಾಗಿ ಕಾಯುತ್ತಿದ್ದ ಕಾರ್ಯಕರ್ತರು ಹಾರ ಹಾಕಿ ಶಾಲು ಹೊದೆಸಿ ಗೌರವಿಸಿದರು.

ಹಾಸನ: ನಿನ್ನೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ (HD Devegowda) ಹಾಸನಕ್ಕೆ ಹೆಲಿಕಾಪ್ಟರ್ ನಲ್ಲಿ (helicopter) ಆಗಮಿಸಿ 90ರ ಇಳಿವಯಸ್ಸಿನಲ್ಲೂ ಜೆಡಿಎಸ್ ಅಭ್ಯರ್ಥಿಗಳ ಪರ ಜೋರು ಪ್ರಚಾರ ನಡೆಸಿದ್ದರು. ಅವರು ಬಿಳಿ ಬಣ್ಣದ ಚಾಪರ್ ನಲ್ಲಿ ಬಂದಿದ್ದರೆ ಇಂದು ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಕಡುಗೆಂಪು ವರ್ಣದ ಹೆಲಿಕಾಪ್ಟರ್ ನಲ್ಲಿ ಹಾಸನಕ್ಕೆ ಬಂದರು. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪರ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಹೆಲಿಪ್ಯಾಡ್ ನಲ್ಲಿ ಚಾಪರ್ ಲ್ಯಾಂಡ್ ಆಗಿ ಯಡಿಯೂರಪ್ಪ ಕೆಳಗಿಳಿದ ಬಳಿಕ ಅವರಿಗಾಗಿ ಕಾಯುತ್ತಿದ್ದ ಕಾರ್ಯಕರ್ತರು ಹಾರ ಹಾಕಿ ಶಾಲು ಹೊದೆಸಿ ಗೌರವಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More