ಯಡಿಯೂರಪ್ಪರಿಂದ ನನಗೆ ಬರೀ ಮೋಸವಾಗಿದೆ, ಇನ್ನು ಅವರನ್ನು ನಂಬಲಾಗಲ್ಲ: ಕೆ ಎಸ್ ಈಶ್ವರಪ್ಪ

ಕಾಂತೇಶ್ ನನ್ನು ಎಂಎಲ್ ಸಿ ಮಾಡ್ತೀನಿ ಅಂತ ಈಗ ಹೇಳುತ್ತಾ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ತನಗೆ ಕೋರ್ಟ್ ಕ್ಲೀನ್ ಕೊಟ್ಟ ತಕ್ಷಣ ಪುನಃ ಮಂತ್ರಿ ಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ ಆಗಲೂ ಮೋಸಮಾಡಿದರು, 40 ವರ್ಷಗಳ ಪಕ್ಷದ ಸಂಘಟನೆ ಮಾಡಿದ ತನ್ನಂಥವನಿಗೆ ಇಷ್ಟು ದೊಡ್ಡ ಮೋಸಗಳನ್ನು ಮಾಡಿದರೆ ಅವರನ್ನು ನಂಬೋದಾದರೂ ಹೇಗೆ ಎಂದು ಈಶ್ವರಪ್ಪ ಕೇಳಿದರು.

ಯಡಿಯೂರಪ್ಪರಿಂದ ನನಗೆ ಬರೀ ಮೋಸವಾಗಿದೆ, ಇನ್ನು ಅವರನ್ನು ನಂಬಲಾಗಲ್ಲ: ಕೆ ಎಸ್ ಈಶ್ವರಪ್ಪ
|

Updated on: Mar 14, 2024 | 7:22 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಂದ ತನಗೆ ಕೇವಲ ಮೋಸ ಮತ್ತು ವಂಚನೆ ಮಾತ್ರ ಆಗಿದೆ, ಇನ್ನು ಅವರನ್ನು ನಂಬಲಾಗಲ್ಲ ಎಂದು ಅವರ ದಶಕಗಳ ದೋಸ್ತಿ ಕೆಎಸ್ ಈಶ್ವರಪ್ಪ (KS Eshwarappa) ಗುಡುಗಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತನ್ನ ಮಗನಿಗೆ ಹಾವೇರಿ ಕ್ಷೇತ್ರದ (Haveri constituency) ಟಿಕೆಟ್ ಕೊಡಿಸುವ ಭರವಸೆ ಯಡಿಯೂರಪ್ಪ ನೀಡಿದ ಬಳಿಕ ಕಾಂತೇಶ್ ಅಲ್ಲಿ ಒಂದು ವರ್ಷದಿಂದ ಕೆಲಸ ಮಾಡುತ್ತಾ ಜನರ ಅನುರಾಗ ಗಳಿಸಿದ್ದ. ಇನ್ನೇನು ಟಿಕೆಟ್ ಸಿಗುತ್ತದೆ ಅಂದುಕೊಳ್ಳುವಾಗಲೇ ಮೋಸ ಮಾಡಿಬಿಟ್ಟರು. ಕಾಂತೇಶ್ ನನ್ನು ಎಂಎಲ್ ಸಿ ಮಾಡ್ತೀನಿ ಅಂತ ಈಗ ಹೇಳುತ್ತಾ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ತನಗೆ ಕೋರ್ಟ್ ಕ್ಲೀನ್ ಕೊಟ್ಟ ತಕ್ಷಣ ಪುನಃ ಮಂತ್ರಿ ಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ ಆಗಲೂ ಮೋಸಮಾಡಿದರು, 40 ವರ್ಷಗಳ ಪಕ್ಷದ ಸಂಘಟನೆ ಮಾಡಿದ ತನ್ನಂಥವನಿಗೆ ಇಷ್ಟು ದೊಡ್ಡ ಮೋಸಗಳನ್ನು ಮಾಡಿದರೆ ಅವರನ್ನು ನಂಬೋದಾದರೂ ಹೇಗೆ ಎಂದು ಈಶ್ವರಪ್ಪ ಕೇಳಿದರು.

ತಾನು ರಾಯಣ್ಣ ಬ್ರಿಗೇಡ್ ಮಾಡಿದಾಗಲೂ ಅಮಿತ್ ಶಾ ಅವರಿಗೆ ಹೇಳಿ ಅದಕ್ಕೆ ಅಡ್ಡಗಾಲು ಹಾಕಿ ನಿಲ್ಲಿಸಿಬಿಟ್ಟರು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಶೋಭಾ ಅಭಿಯಾನ ನಡೆದರೂ ಅವರಿಗೆ ಡಿವಿ ಸದಾನಂದಗೌಡ ಪ್ರತಿನಿಧಿಸುವ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೊಡಿಸಿದ್ದಾರೆ, ಅದೇ ಹಟಮಾರಿತನವನ್ನು ಅವರು ತನ್ನ ಮಗನ ವಿಷಯದಲ್ಲಿ ಯಾಕೆ ಪ್ರದರ್ಶಿಸಲಿಲ್ಲ ಎಂದು ಈಶ್ವರಪ್ಪ ಖಾರವಾಗಿ ಪ್ರಶ್ನಿಸಿದರು. ಕಾರ್ಯಕರ್ತರೊಡನೆ ಚರ್ಚಿಸಿ ತಮ್ಮ ಮುಂದಿನ ನಡೆ ತಿಳಿಸುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿ ಎರಡನೇ ಪಟ್ಟಿ: ವಿರೋಧಿಗಳಿಗೆ ಟಿಕೆಟ್ ತಪ್ಪಿಸುವಲ್ಲಿ ಬಿಎಸ್ ಯಡಿಯೂರಪ್ಪ ಮೇಲುಗೈ, ಸಂತೋಷ್ ಬಣಕ್ಕೆ ಅಲ್ಪ ಯಶಸ್ಸು

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ