Sandur: ವೇದಿಕೆಯ ಮೇಲೆ ಅಮಿತ್ ಶಾ ತೋರಿದ ಅವಸರದ ಪ್ರವೃತ್ತಿ ಮತ್ತು ಬಿಎಸ್ ಯಡಿಯೂರಪ್ಪ ಸನ್ಮಾನ ನಿರಾಕರಿಸಿದ್ದು ಜನಕ್ಕೆ ಅರ್ಥವಾಗಲಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 23, 2023 | 5:14 PM

ಕಾರ್ಯಕ್ರಮದ ನಿರೂಪಕರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಸತ್ಕರಿಸುವ ಬಗ್ಗೆ ಘೋಷಣೆ ಮಾಡಿದಾಗ ಹಿರಿಯ ಮುತ್ಸದ್ದಿ ಹಾರ ಕೂಡ ಹಾಕಿಸಿಕೊಳ್ಳದೆ ಹಿಂದಕ್ಕೆ ಸರಿದುಬಿಡುತ್ತಾರೆ.

ಬಳ್ಳಾರಿ: ಜಿಲ್ಲೆಯ ಸಂಡೂರಿಗೆ ಅಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ವಿಜಯಸಂಕಲ್ಪ ಯಾತ್ರೆ ಉದ್ಘಾಟನೆ ಮಾಡಲು ವೇದಿಕೆ ಹತ್ತಿದಾಗ ಅದ್ಯಾಕೆ ಅಷ್ಟು ಅವರಸದ ಪ್ರವೃತ್ತಿ ತೋರಿದರು ಅನ್ನೋದು ನೆರೆದಿದ್ದ ಜನಕ್ಕೆ ಅರ್ಥವಾಗಲಿಲ್ಲ. ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರು ಶಾ ಅವರನ್ನು ಸತ್ಕರಿಸುವಾಗಲೂ ಧಾವಂತ ಪ್ರದರ್ಶಿಸುತ್ತಾರೆ. ಅದೇ ಸಮಯದಲ್ಲಿ ಮತ್ತೊಂದು ಘಟನೆ ನಡೆಯುತ್ತದೆ. ಕಾರ್ಯಕ್ರಮದ ನಿರೂಪಕರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು (BS Yediyurappa) ಸತ್ಕರಿಸುವ ಬಗ್ಗೆ ಘೋಷಣೆ ಮಾಡಿದಾಗ ಹಿರಿಯ ಮುತ್ಸದ್ದಿ ಹಾರ ಕೂಡ ಹಾಕಿಸಿಕೊಳ್ಳದೆ ಹಿಂದಕ್ಕೆ ಸರಿದುಬಿಡುತ್ತಾರೆ. ಅವರು ಯಾಕೆ ಹಾಗೆ ಮಾಡಿದರು ಅಂತಲೂ ಜನರಿಗೆ ಅರ್ಥವಾಗಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.