AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಯಡಿಯೂರಪ್ಪ ಅದ್ಯಾವ ನೈತಿಕತೆಯೊಂದಿಗೆ ಮುಂದಾಗಿದ್ದಾರೋ? ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಯಡಿಯೂರಪ್ಪ ಅದ್ಯಾವ ನೈತಿಕತೆಯೊಂದಿಗೆ ಮುಂದಾಗಿದ್ದಾರೋ? ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 14, 2023 | 4:25 PM

ಹಿರಿಯ ನಾಯಕರಾದ ಆರ್ ಅಶೋಕ್ ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ ವಿರೋಧ ಪಕ್ಷದ ನಾಯಕನ ಸ್ಥಾನ ಗಿಟ್ಟಿಸಲು ಸುಖಾಸುಮ್ಮನೆ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಗಂಟಲು ಹರಿದುಕೊಳ್ಳುತ್ತಿದ್ದಾರೆ. ಆದರೆ ಅವರೇನೇ ಮಾಡಿದರೂ ಆ ಸ್ಥಾನ ಸಿಗಲ್ಲ ಎಂದು ಲಕ್ಷ್ಮಣ್ ಹೇಳಿದರು.

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ (M Laxman) ಇಂದು ಮೈಸೂರು ಬದಲು ಬೆಂಗಳೂರಲ್ಲಿ ಸುದ್ದಿಗೋಷ್ಟಿ ನಡೆಸಿದರು. ಬಿಎಸ್ ಯಡಿಯೂರಪ್ಪನವರು (BS Yediyurappa) ಹಿಂದೊಮ್ಮೆ ವಿಧಾನ ಸಭಾ ಆಧಿವೇಶನ ನಡೆಯುತ್ತಿದ್ದಾಗ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ಹಿಗ್ಗಾಮುಗ್ಗಾ ಟೀಕಿಸಿದ ಆಡಿಯೋವನ್ನು ತಮ್ಮ ಮೊಬೈಲ್ ಮೂಲಕ ಪತ್ರಕರ್ತರಿಗೆ ಕೇಳಿಸಿ ಅದ್ಯಾವ ನೈತಿಕತೆಯಿಂದ ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಮುಂದಾಗಿದ್ದರೋ ಅಂತ ಗೇಲಿ ಮಾಡಿದರು. ಇದುವರೆಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಅಯ್ಕೆಮಾಡಲಾದ ಬಿಜೆಪಿ ಯೋಗ್ಯತೆ ಪ್ರಶ್ನಿಸಿದ ಲಕ್ಷ್ಮಣ್ ಆ ಸ್ಥಾನದಲ್ಲಿ ಕುಮಾರಸ್ವಾಮಿಯನ್ನು ಕೂರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಹಿರಿಯ ನಾಯಕರಾದ ಆರ್ ಅಶೋಕ್ ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ ವಿರೋಧ ಪಕ್ಷದ ನಾಯಕನ ಸ್ಥಾನ ಗಿಟ್ಟಿಸಲು ಸುಖಾಸುಮ್ಮನೆ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಗಂಟಲು ಹರಿದುಕೊಳ್ಳುತ್ತಿದ್ದಾರೆ. ಆದರೆ ಅವರೇನೇ ಮಾಡಿದರೂ ಆ ಸ್ಥಾನ ಸಿಗಲ್ಲ ಎಂದು ಲಕ್ಷ್ಮಣ್ ಹೇಳಿದರು. ಲೋಕ ಸಭಾ ಚುನಾವಣೆ ಮುಗಿಯುವವರೆಗೆ ನಳಿನ್ ಕುಮಾರ್ ಕಟೀಲ್ ಅವರನ್ನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಸುವಂತೆ ಯಡಿಯೂರಪ್ಪನವರ ಮೂಲಕ ಬಿಜೆಪಿ ವರಿಷ್ಠರಿಗೆ ವಿನಂತಿಸಿಕೊಳ್ಳುತ್ತೇನೆ ಅಂತ ಲಕ್ಷ್ಮಣ್ ವ್ಯಂಗ್ಯವಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ