ಸೋಮಣ್ಣ ಮೇಲೆ ಮಾಧುಸ್ವಾಮಿ ಮುನಿಸು; ಯಡಿಯೂರಪ್ಪ ಹೇಳಿದ್ದಿಷ್ಟು

ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: Mar 23, 2024 | 8:38 AM

ಲೋಕಸಭಾ ಚುನಾವಣೆಗೆ ತುಮಕೂರಿನಿಂದ ಬಿಜೆಪಿ ಟಿಕೆಟ್​ ಆಕಾಂಕ್ಷಿ ಆಗಿದ್ದ ಮಾಧುಸ್ವಾಮಿಗೆ (Madhuswamy)ನೀಡದೇ ವಿ.ಸೋಮಣ್ಣ ಅವರಿಗೆ ಟಿಕೆಟ್​ ನೀಡಿರುವುದರಿಂದ ಮಾಧುಸ್ವಾಮಿ, ಸೋಮಣ್ಣ(V.Somanna) ಮೇಲೆ ಮುನಿಸಿಕೊಂಡಿದ್ದಾರೆ. ಈ ಹಿನ್ನಲೆ ಇದನ್ನು ಇವರಿಬ್ಬರ ನಡುವಿನ ಅಸಮಧಾನ ತಣ್ಣಗಾಗಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ(B. S. Yediyurappa)ಬಂದು ಮಾತುಕತೆ ನಡೆಸಿದ್ದಾರೆ.

ತುಮಕೂರು, ಮಾ.23: ಲೋಕಸಭಾ ಚುನಾವಣೆಗೆ ತುಮಕೂರಿನಿಂದ ಬಿಜೆಪಿ ಟಿಕೆಟ್​ ಆಕಾಂಕ್ಷಿ ಆಗಿದ್ದ ಮಾಧುಸ್ವಾಮಿಗೆ (Madhuswamy)ನೀಡದೇ ವಿ.ಸೋಮಣ್ಣ ಅವರಿಗೆ ಟಿಕೆಟ್​ ನೀಡಿರುವುದರಿಂದ ಮಾಧುಸ್ವಾಮಿ, ಸೋಮಣ್ಣ (V.Somanna) ಮೇಲೆ ಮುನಿಸಿಕೊಂಡಿದ್ದಾರೆ. ಈ ಹಿನ್ನಲೆ ಇದನ್ನು ಇವರಿಬ್ಬರ ನಡುವಿನ ಅಸಮಧಾನ ತಣ್ಣಗಾಗಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ(B. S. Yediyurappa)ಬಂದು ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ‘ಮಾಧುಸ್ವಾಮಿ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ, ಸೋಮಣ್ಣ ಪರ ಕೆಲಸ ಮಾಡೋದು ಮಾಧುಸ್ವಾಮಿಗೆ ಬಿಟ್ಟಿರೋದು, ಲೋಕಸಭಾ ಚುನಾವಣೆಯ ಪ್ರಚಾರದ ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...