BSY too has no clue; ವಿರೋಧ ಪಕ್ಷದ ನಾಯಕನ ಹೆಸರನ್ನು ನಾಳೆ ಅಮಿತ್ ಶಾ ಸೂಚಿಸಲಿದ್ದಾರೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jul 03, 2023 | 4:12 PM

ಬಿಜೆಪಿ ನಾಯಕರೆಲ್ಲ, ನಾಳೆ ಗೊತ್ತಾಗಲಿದೆ ಅಂತಲೇ ಒಂದು ವಾರದಿಂದ ಹೇಳುತ್ತಿದ್ದಾರೆ.

ಬೆಂಗಳೂರು: ದೆಹಲಿಗೆ ಹೋಗಿದ್ದ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ (BS Yediyurappa) ಇಂದು ನಗರಕ್ಕೆ ವಾಪಸ್ಸಾದರು. ದೇವನಳ್ಳಿಯ ಕೆಐಎ ವಿಮಾನ ನಿಲ್ದಾಣದಲ್ಲಿ (KIA International Airport) ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಅನ್ಯಮನಸ್ಕರಾಗಿ ಉತ್ತರಿಸಿದರು. ಕೇಳಿದ ಪ್ರಶ್ನೆ ಎಲ್ಲ ಬಿಜೆಪಿ ನಾಯಕರಿಗೆ ಇರುಸು ಮುರುಸು ಉಂಟು ಮಾಡುವಂಥದ್ದೇ. ವಿಧಾನ ಮಂಡಲದ ಬಜೆಟ್ ಅಧಿವೇಶನ ಶುರುವಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿಯಾಗಿರುವುದಾಗಿ ಹೇಳಿದ ಯಡಿಯೂರಪ್ಪ ಗೃಹ ಸಚಿವ ಅಮಿತ್ ಶಾ (Amit Shah) ಅವರೊಂದಿಗೂ ಮಾತಾಡಿರುವುದಾಗಿ ಹೇಳಿದರು. ಮಾಜಿ ಮುಖ್ಯಮಂತ್ರಿಗಳು ಹೇಳುವ ಪ್ರಕಾರ ವಿರೋಧ ಪಕ್ಷದ ನಾಯಕನ ಹೆಸರನ್ನು ಅಮಿತ್ ಶಾ ನಾಳೆ ಸೂಚಿಸಲಿದ್ದಾರೆ. ಬಿಜೆಪಿ ನಾಯಕರೆಲ್ಲ, ನಾಳೆ ಗೊತ್ತಾಗಲಿದೆ ಅಂತಲೇ ಒಂದು ವಾರದಿಂದ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.