BSY Secluded: ಪ್ರತಿಮೆ ಅನಾವರಣ ಸಮಾರಂಭಕ್ಕೆ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಬಂದಿದ್ದನ್ನು ಬಹಳಷ್ಟು ಜನ ಗಮನಿಸಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2023 | 10:51 AM

ಯಾವಾಗ ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದರೋ ಬಿಜೆಪಿಯ ನಾಯಕರು ಕಡೆಗಣಿಸಲಾರಂಭಿಸಿದ್ದಾರೆ. 80 ರ ಪ್ರಾಯದ ಮುತ್ಸದ್ದಿ ಈ ಬೆಳವಣಿಗೆಯನ್ನು ಸ್ಪೋರ್ಟ್ ಆಗಿ ಸ್ವೀಕರಿಸಿದ್ದಾರೆ.

ಬೆಂಗಳೂರು: ರವಿವಾರದಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ (Jagajyoti Basaveshwara) ಮತ್ತು ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಪ್ರತಿಮೆ ಅನಾವರಣ ಮಾಡಿದ್ದನ್ನು ನಾವು ವರದಿ ಮಾಡಿದ್ದೇವೆ. ಆದರೆ ಈ ಸಂಗತಿ ಮಿಸ್ ಆಗಿತ್ತು. ವಿಷಯವೇನೆಂದರೆ, ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಒಬ್ಬಂಟಿಯಾಗಿ ಅಗಮಿಸಿದರು. ಕೇವಲ ಒಂದೆರಡು ತಿಂಗಳ ಹಿಂದೆ ಅವರ ಜೊತೆ ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರ ಮತ್ತು ಶಾಸಕರ ದಂಡಿರುತ್ತಿತ್ತು. ಯಾವಾಗ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದರೋ ಬಿಜೆಪಿಯ ನಾಯಕರು ಕಡೆಗಣಿಸಲಾರಂಭಿಸಿದ್ದಾರೆ. 80 ರ ಪ್ರಾಯದ ಮುತ್ಸದ್ದಿ ಈ ಬೆಳವಣಿಗೆಯನ್ನು ಸ್ಪೋರ್ಟ್ ಆಗಿ ಸ್ವೀಕರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.